ಬ್ರೇಕಿಂಗ್ ನ್ಯೂಸ್
19-12-23 01:13 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ.19: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಪಾಲಿನ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಸಾಧ್ಯತೆಗಳಿವೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.
"ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು.
ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭಗೊಂಡು 22ರ ವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆಸಲು ಮೂರು ಮಂದಿಯ ತಂಡವನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ದೇಶದ ವಿವಿಧೆಡೆಯಿಂದ ನಾಲ್ಕು ಸಾವಿರ ಸಾಧು ಸಂತರು, 2200 ಅತಿಥಿಗಳು ಆಗಮಿಸಲಿದ್ದಾರೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಜನವರಿ 24ರಿಂದ 48 ದಿವಸಗಳ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಜನವರಿ 23ರಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
BJP veterans LK Advani and Murli Manohar Joshi who were at the forefront of the agitation for the Ram temple in Ayodhya are unlikely to attend next month’s consecration ceremony due to their health and age, the temple trust said here on Monday.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm