ಬ್ರೇಕಿಂಗ್ ನ್ಯೂಸ್
19-12-23 01:13 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ.19: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಪಾಲಿನ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರು ವಯಸ್ಸು ಮತ್ತು ಆರೋಗ್ಯಸಮಸ್ಯೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಸಾಧ್ಯತೆಗಳಿವೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.
"ಕುಟುಂಬದ ಅತ್ಯಂತ ಹಿರಿಯರಾಗಿರುವ ಇಬ್ಬರು ಮುಖಂಡರ ವಯಸ್ಸಿನ ಹಿನ್ನೆಲೆಯಲ್ಲಿ ಅವರು ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ" ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದು, ಮುರಳಿ ಮನೋಹರ ಜೋಶಿಯವರು ಮುಂದಿನ ತಿಂಗಳು 90ಕ್ಕೆ ಕಾಲಿಡಲಿದ್ದಾರೆ. ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಯ್ ಸ್ಪಷ್ಟಪಡಿಸಿದರು.
ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭಗೊಂಡು 22ರ ವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆಸಲು ಮೂರು ಮಂದಿಯ ತಂಡವನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ದೇಶದ ವಿವಿಧೆಡೆಯಿಂದ ನಾಲ್ಕು ಸಾವಿರ ಸಾಧು ಸಂತರು, 2200 ಅತಿಥಿಗಳು ಆಗಮಿಸಲಿದ್ದಾರೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಜನವರಿ 24ರಿಂದ 48 ದಿವಸಗಳ ಮಂಡಲ ಪೂಜೆ ಆರಂಭಗೊಳ್ಳಲಿದ್ದು ಜನವರಿ 23ರಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
BJP veterans LK Advani and Murli Manohar Joshi who were at the forefront of the agitation for the Ram temple in Ayodhya are unlikely to attend next month’s consecration ceremony due to their health and age, the temple trust said here on Monday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm