ಬ್ರೇಕಿಂಗ್ ನ್ಯೂಸ್
20-12-23 01:11 pm HK News Desk ದೇಶ - ವಿದೇಶ
ಲಕ್ನೋ, ಡಿ.20: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ ಅಧಿಕೃತ ಆಹ್ವಾನ ನೀಡಿದೆ.
ಸಾಕಷ್ಟು ಸ್ವಾಮೀಜಿಗಳಿಗೆ ಹಾಗೂ ಹಿರಿಯ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದರೂ ರಾಮಮಂದಿರಕ್ಕಾಗಿ ನಡೆಸಿದ್ದ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಆಡ್ವಾಣಿ ಮತ್ತು ಜೋಶಿ ಇಬ್ಬರನ್ನು ವಯಸ್ಸಿನ ಕಾರಣ ಹೇಳಿ ದೂರ ಇರಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಇಬ್ಬರೂ ನಾಯಕರಿಗೆ ವಿಎಚ್ ಪಿ ಕಡೆಯಿಂದ ಆಹ್ವಾನ ನೀಡಲಾಗಿದೆ.
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಆಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರೂ ಹಿರಿಯರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಎಚ್ ಪಿ ಪ್ರಮುಖರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಡ್ವಾಣಿ (96) ಮತ್ತು ಮುರಳಿ ಮನೋಹರ್ ಜೋಷಿ (89) ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂದಿನ ತಿಂಗಳ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ. ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಗಿದೆ, ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ದೇವಸ್ಥಾನದ ಟ್ರಸ್ಟಿ ಚಂಪತ್ ರಾಯ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಟೀಕೆ ಕೇಳಿಬರುತ್ತಿದ್ದಂತೆ ವಿಶ್ವ ಹಿಂದು ಪರಿಷತ್ ಆ ಇಬ್ಬರು ನಾಯಕರನ್ನು ರಾಮ ಮಂದಿರ ಉದ್ಘಾಟನೆಗೆ ಕರೆಸಲು ಮುಂದಾಗಿದೆ.
BJP veterans L K Advani and Murli Manohar Joshi were invited by the Vishva Hindu Parishad (VHP) to attend the consecration ceremony of the Ram Temple in Ayodhya next month. Both Advani and Joshi were at the forefront of the agitation for the Ram temple.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm