ಬ್ರೇಕಿಂಗ್ ನ್ಯೂಸ್
20-12-23 01:11 pm HK News Desk ದೇಶ - ವಿದೇಶ
ಲಕ್ನೋ, ಡಿ.20: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ ಅಧಿಕೃತ ಆಹ್ವಾನ ನೀಡಿದೆ.
ಸಾಕಷ್ಟು ಸ್ವಾಮೀಜಿಗಳಿಗೆ ಹಾಗೂ ಹಿರಿಯ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದರೂ ರಾಮಮಂದಿರಕ್ಕಾಗಿ ನಡೆಸಿದ್ದ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಆಡ್ವಾಣಿ ಮತ್ತು ಜೋಶಿ ಇಬ್ಬರನ್ನು ವಯಸ್ಸಿನ ಕಾರಣ ಹೇಳಿ ದೂರ ಇರಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಇಬ್ಬರೂ ನಾಯಕರಿಗೆ ವಿಎಚ್ ಪಿ ಕಡೆಯಿಂದ ಆಹ್ವಾನ ನೀಡಲಾಗಿದೆ.
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಆಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರೂ ಹಿರಿಯರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಎಚ್ ಪಿ ಪ್ರಮುಖರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಡ್ವಾಣಿ (96) ಮತ್ತು ಮುರಳಿ ಮನೋಹರ್ ಜೋಷಿ (89) ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂದಿನ ತಿಂಗಳ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ. ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಗಿದೆ, ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ದೇವಸ್ಥಾನದ ಟ್ರಸ್ಟಿ ಚಂಪತ್ ರಾಯ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಟೀಕೆ ಕೇಳಿಬರುತ್ತಿದ್ದಂತೆ ವಿಶ್ವ ಹಿಂದು ಪರಿಷತ್ ಆ ಇಬ್ಬರು ನಾಯಕರನ್ನು ರಾಮ ಮಂದಿರ ಉದ್ಘಾಟನೆಗೆ ಕರೆಸಲು ಮುಂದಾಗಿದೆ.
BJP veterans L K Advani and Murli Manohar Joshi were invited by the Vishva Hindu Parishad (VHP) to attend the consecration ceremony of the Ram Temple in Ayodhya next month. Both Advani and Joshi were at the forefront of the agitation for the Ram temple.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am