ಬ್ರೇಕಿಂಗ್ ನ್ಯೂಸ್
24-12-23 09:07 pm HK News Desk ದೇಶ - ವಿದೇಶ
ನವದೆಹಲಿ, ಡಿ.24: ಮಹತ್ವದ ಬೆಳವಣಿಗೆಯಲ್ಲಿ ಮೊನ್ನೆಯಷ್ಟೇ ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ ಸಮಿತಿಯನ್ನು ಕೇಂದ್ರ ಸರ್ಕಾರದ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿ ಆದೇಶ ಮಾಡಿದೆ.
ಕುಸ್ತಿ ಫೆಡರೇಶನ್ ಹೊಸತಾಗಿದ್ದರೂ ಹಳೆಯ ಅಧ್ಯಕ್ಷರದ್ದೇ ಹಿಡಿತದಲ್ಲಿದೆ, ಕುಸ್ತಿ ಪಂದ್ಯಾಟ ನಡೆಸುವ ವಿಚಾರದಲ್ಲಿ ಒಕ್ಕೂಟದ ನಿಯಮವನ್ನು ಉಲ್ಲಂಘಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಅದನ್ನು ಹಿಂದಿನ ಅಧ್ಯಕ್ಷರ ಊರಲ್ಲೇ ತರಾತುರಿಯಲ್ಲಿ ಆಯೋಜಿಸಿರುವುದು ಆಕ್ಷೇಪಾರ್ಹ ಎಂದು ಕ್ರೀಡಾ ಸಚಿವಾಲಯ ನೂತನ ಸಮಿತಿಯನ್ನೇ ಅಮಾನತುಗೊಳಿಸಿದ್ದಾಗಿ ಹೇಳಿಕೊಂಡಿದೆ. ಆದರೆ ಕುಸ್ತಿ ಒಕ್ಕೂಟಕ್ಕೆ ಹೊಸತಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಜಯ್ ಸಿಂಗ್ ಬಗ್ಗೆ ಭಾರೀ ಟೀಕೆ ಎದುರಾಗಿತ್ತು. ಕುಸ್ತಿ ಪಟು ಸಾಕ್ಷಿ ಮಲಿಕ್ ಕ್ರೀಡೆಯನ್ನೇ ತೊರೆಯುವ ಮಾತನ್ನಾಡಿದ್ದರೆ, ಬಜರಂಗ್ ಪುನಿಯಾ, ವೀರೇಂದ್ರ ಸಿಂಗ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುವುದಾಗಿ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚತ್ತುಕೊಂಡ ಕೇಂದ್ರ ಸರ್ಕಾರ, ಆರೋಪ ಹೊತ್ತ ಬ್ರಿಜ್ ಭೂಷಣ್ ಸಿಂಗ್ ಆಪ್ತರಿದ್ದ ಕುಸ್ತಿ ಒಕ್ಕೂಟದ ಸಮಿತಿಯನ್ನೇ ಅಮಾನತು ಗೊಳಿಸಿದೆ.
ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಸಿಂಗ್ ಆಯ್ಕೆಯಾದ ಬೆನ್ನಲ್ಲೇ 15 ಮತ್ತು 20 ವರ್ಷದ ಒಳಗಿನ ರಾಷ್ಟ್ರೀಯ ಕುಸ್ತಿ ಪಂದ್ಯಾಟವನ್ನು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯ ಕುಸ್ತಿ ಪಟುಗಳಿಗೆ ಸೂಚನೆ ನೀಡದೆ ಮತ್ತು ಒಕ್ಕೂಟದ ಸಂವಿಧಾನದ ನಿಬಂಧನೆಗಳನ್ನು ಅನುಸರಿಸದೆ ಈ ಘೋಷಣೆಯನ್ನು ಮಾಡಲಾಗಿದೆ ಎಂದು ಸಚಿವಾಲಯ ಹೇಳಿಕೊಂಡಿದೆ. ಗೊಂಡಾ ಜಿಲ್ಲೆ ಹಿಂದಿನ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು ಇದಕ್ಕಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.
The Sports Ministry suspended the Wrestling Federation of India (WFI) on Sunday until further notice following an abrupt announcement of the national championships by the newly-elected body.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm