ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.
ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.
ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm