ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am