ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm