ಬ್ರೇಕಿಂಗ್ ನ್ಯೂಸ್
26-12-23 01:21 pm HK News Desk ದೇಶ - ವಿದೇಶ
ಭೋಪಾಲ್, ಡಿ 26: ಗುಜರಿ ತುಂಬಿದ ಟ್ರಕ್ ಕಾರೊಂದರ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗುನಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಜ್ಗಢ್ ಜಿಲ್ಲೆಯ ದಂಪತಿಗಳು ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಘಟನೆಯಲ್ಲಿ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 46 ರಲ್ಲಿ ಕುಟುಂಬದ ಸದಸ್ಯರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಜರಿ ತುಂಬಿದ ಟ್ರಕ್ ವೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರಿನ ಮೇಲೆಯೇ ಬಿದ್ದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಆದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣತೆತ್ತಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಟ್ರಕ್ 40 ಟನ್ಗಳಿಗಿಂತ ಹೆಚ್ಚು ಗುಜರಿಯನ್ನು ಹೊತ್ತೊಯ್ಯುತ್ತಿತ್ತು. ರಸ್ತೆಯಲ್ಲಿ ಮಂಜು ಆವರಿಸಿದ್ದ ಕಾರಣದಿಂದ ಸರಿಯಾಗಿ ಮಾರ್ಗ ಗೋಚರಿಸದೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಪೊಲೀಸರು ಕಾರಿನ ನೋಂದಣಿ ಸಂಖ್ಯೆಯ ಸಹಾಯದಿಂದ ಮೃತ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಟ್ರಕ್ ತುಂಬಾ ಭಾರವಾಗಿದ್ದರಿಂದ ಪೊಲೀಸರು ಅದನ್ನು ಮೇಲೆತ್ತಲು ಕ್ರೇನ್ ಮತ್ತು ಗುಜರಿಯನ್ನು ತೆಗೆಯಲು ಜೆಸಿಬಿ ಯಂತ್ರವನ್ನು ಬಳಸಿದ್ದಾರೆ.
ಗುಜರಿಯನ್ನು ತೆಗೆದ ನಂತರವೇ ಟ್ರಕ್ ನ್ನು ಚಲಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.
In a tragic incident, four members of a family were killed and two sustained grave injuries after a scrap-laden truck fell on their car in Madhya Pradesh’s Guna district early on Tuesday. As per the reports, the scrap-laden truck lost control and fell on the car when it tried to overtake the vehicle. The police also said that high speed and poor visibility due to heavy fog on the National Highway (NH-46) led to the tragic accident.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm