ಬ್ರೇಕಿಂಗ್ ನ್ಯೂಸ್
26-12-23 02:10 pm HK News Desk ದೇಶ - ವಿದೇಶ
ಮುಂಬೈ, ಡಿ.26: ಅರಬ್ಬೀ ಸಮುದ್ರದಲ್ಲಿ ಡ್ರೋಣ್ ದಾಳಿಗೆ ಒಳಗಾಗಿದ್ದ ಇಸ್ರೇಲ್ ಮೂಲದ ವಾಣಿಜ್ಯ ಹಡಗು ಎಂವಿ ಕೆಮ್ ಫ್ಲೂಟೊ ಸದ್ಯ ಮುಂಬೈ ಬಂದರನ್ನು ತಲುಪಿದೆ. ಡ್ರೋನ್ ದಾಳಿಯಿಂದ ಹಡಗಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದ್ದು ನೌಕಾಸೇನೆ ವಿವಿಧ ಏಜನ್ಸಿಗಳ ಜೊತೆಗೆ ಹೆಚ್ಚಿನ ತನಿಖೆ ಆರಂಭಿಸಿದೆ.
ಸೌದಿ ಅರೇಬಿಯಾದಿಂದ ಮಂಗಳೂರಿನ ಬಂದರಿಗೆ ಕಚ್ಚಾ ತೈಲ ಹೊತ್ತುಕೊಂಡು ಹೊರಟಿದ್ದ ಹಡಗಿನ ಮೇಲೆ ಗುಜರಾತ್ ಬಳಿ ಸಮುದ್ರ ಮಧ್ಯೆ ಡ್ರೋಣ್ ದಾಳಿ ನಡೆಸಲಾಗಿತ್ತು. ಈ ದಾಳಿಯನ್ನು ಇರಾನ್ ನಡೆಸಿದೆ ಎಂದು ಅಮೆರಿಕದ ಭದ್ರತಾ ಸಂಸ್ಥೆ ಹೇಳಿತ್ತು. ಸರಕು ಹಡಗು ಡಿಸೆಂಬರ್ 19 ರಂದು ಪ್ರಯಾಣ ಆರಂಭಿಸಿತ್ತು. ಡಿಸೆಂಬರ್ 25 ರಂದು ನವ ಮಂಗಳೂರು ಬಂದರಿಗೆ ತಲುಪಬೇಕಿತ್ತು. ಡಿಸೆಂಬರ್ 23 ರಂದು ಗುಜರಾತ್ನ ವೆರಾವಲ್ ಕರಾವಳಿಯಿಂದ ಸುಮಾರು 200 ನಾಟಿಕಲ್ ಮೈಲುಗಳಷ್ಟು ದೂರದ ಸಮುದ್ರದಲ್ಲಿ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿತ್ತು. ಜಪಾನ್ ಒಡೆತನದ ಹಡಗು ಇದಾಗಿದ್ದು, ಇಸ್ರೇಲ್ ಸಹಭಾಗಿತ್ವ ಹೊಂದಿದೆ.



ದಾಳಿಯ ಮಾಹಿತಿ ತಿಳಿದ ತಕ್ಷಣ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್ಗೆ ಸಂಕಷ್ಟದಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ಹೋಗುವಂತೆ ಸೂಚಿಸಲಾಗಿತ್ತು. ಅದರಂತೆ ದಾಳಿಗೀಡಾದ ಎಂವಿ ಕೆಮ್ ಫ್ಲೂಟೋ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ಮುಂಬೈ ಬಂದರಿಗೆ ತಲುಪುವಂತೆ ಮಾಡಿದೆ.
ಪರಿಶೀಲನೆ ಬಳಿಕ ಇದು ಡ್ರೋನ್ ದಾಳಿ ಎಂದು ಭಾರತೀಯ ನೌಕಾಪಡೆ ಖಚಿತಪಡಿಸಿದೆ. ಹೆಚ್ಚಿನ ವಿವರಗಳಿಗಾಗಿ ಫೋರೆನ್ಸಿಕ್ ತನಿಖೆಯ ನಂತರ ದುರಸ್ತಿ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಭಾರತೀಯ ನೌಕಾಪಡೆಯು ಅರಬ್ಬೀ ಸಮುದ್ರದಲ್ಲಿ ಹಡಗುಗಳ ಮೇಲಿನ ದಾಳಿಯ ದೃಷ್ಟಿಯಿಂದ ಕಣ್ಗಾವಲುಗಾಗಿ P-8I ಗಸ್ತು ವಿಮಾನಗಳನ್ನು ನಿಯೋಜಿಸಿದೆ.
Chemical tanker MV Chem Pluto was struck by a drone off India's west coast on Saturday. The attack came amid increasing concerns over various commercial vessels being targeted reportedly by Iran-backed Houthi militants in the Red Sea and Gulf of Aden amid the Israel-Hamas conflict. The vessel with 21 Indian and one Vietnamese crew, anchored at outer anchorage off Mumbai at 3.30 pm.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am