ಬ್ರೇಕಿಂಗ್ ನ್ಯೂಸ್
28-12-23 11:28 am HK News Desk ದೇಶ - ವಿದೇಶ
ಚೆನ್ನೈ, ಡಿ.28: ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಸಂಸ್ಥಾಪಕ ವಿಜಯಕಾಂತ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಗುರುವಾರ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಗುರುವಾರ ಮುಂಜಾನೆ ಅವರ ಪಕ್ಷದ ಡಿಎಂಡಿಕೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ.
ವಿಜಯಕಾಂತ್ ಅವರಿಗೆ 71 ವರ್ಷ ವಯಸಾಗಿತ್ತು. ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಕೋವಿಡ್ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು, ಅವರ ಪತ್ನಿ ಪ್ರೇಮಲತಾ ಅವರು ಕೆಲವು ಹಿಂದೆ ಪಕ್ಷದ ಅಧಿಕಾರವನ್ನು ವಹಿಸಿಕೊಂಡಿದ್ದರು.

ಕಾಜಾ ನಿರ್ದೇಶಿಸಿದ ಇನಿಕ್ಕುಮ್ ಇಳಮೈ (1979) ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದರು. ವೃತ್ತಿಜೀವನದಲ್ಲಿ, ವಿಜಯಕಾಂತ್ ಅವರು ಅಮ್ಮನ್ ಕೋಯಿಲ್ ಕಿಜಕ್ಕಲೆ, ಚಿನ್ನ ಗೌಂಡರ್, ವೈದೇಗಿ ಕತಿರುಂಡಾಲ್, ವಲ್ಲರಸು, ವನತೈ ಪೋಲಾ, ಕ್ಯಾಪ್ಟನ್ ಪ್ರಭಾಕರನ್, ಉಳವು ತುರೈ, ಕಣ್ಣುಪಾದ ಪೋಕುತಯ್ಯ, ರಮಣ, ಹೀಗೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 2015ರ ತಮಿಳು ಚಲನಚಿತ್ರ 'ಸಗಪ್ತಂ'ನಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.

ನಟ ವಿಜಯಕಾಂತ್ 2005 ರಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷವನ್ನು ಸ್ಥಾಪಿಸಿದರು. 2011ರಿಂದ 2016ರವರೆಗೆ ತಮಿಳುನಾಡಿನಲ್ಲಿ ಡಿಎಂಡಿಕೆ ಪ್ರಮುಖ ವಿರೋಧ ಪಕ್ಷವಾಗಿದ್ದು, ವಿಜಯಕಾಂತ್ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. 2006 ರಲ್ಲಿ, ವಿಜಯಕಾಂತ್ ಅವರ ಪಕ್ಷ ಡಿಎಂಡಿಕೆ ತಮಿಳುನಾಡಿನ ಎಲ್ಲಾ 234 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಆದರೆ ವಿಜಯಕಾಂತ್ ಮಾತ್ರ ಚುನಾವಣೆಯಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಉಳಿದ ಎಲ್ಲಾ ಸ್ಥಾನಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು. ಆದರೆ, ಈ ಚುನಾವಣೆಯಲ್ಲಿ ಅವರ ಪಕ್ಷ 8.38% ಮತಗಳನ್ನು ಪಡೆದಿತ್ತು.

2009 ರ ಲೋಕಸಭಾ ಚುನಾವಣೆಯಲ್ಲಿಯೂ ವಿಜಯಕಾಂತ್ ಅವರ ಪಕ್ಷಕ್ಕೆ ಇದೇ ರೀತಿಯ ಪರಿಸ್ಥಿತಿ ಸಂಭವಿಸಿತು. ಪಕ್ಷವು ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 39 ರಲ್ಲಿ ಸ್ಪರ್ಧಿಸಿತು, ಆದರೆ ಒಂದು ಸ್ಥಾನವನ್ನು ಸಹ ಗೆಲ್ಲಲಿಲ್ಲ. ಈ ಎರಡೂ ಚುನಾವಣೆಗಳಲ್ಲಿ ವಿಜಯಕಾಂತ್ ಪಕ್ಷ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿಲ್ಲ.
2011 ರಲ್ಲಿ ವಿಜಯಕಾಂತ್ ಅವರ ಪಕ್ಷವು 41 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ 29 ಸ್ಥಾನಗಳನ್ನು ಗೆದ್ದುಕೊಂಡಿತು. ಈ ಚುನಾವಣೆಯಲ್ಲಿ ಜಯಲಲಿತಾ ಅವರ ಪಕ್ಷ (ಎಐಎಡಿಎಂಕೆ) ನಂತರ ಡಿಎಂಡಿಕೆ ಎರಡನೇ ಪಕ್ಷವಾಗಿ ಹೊರಹೊಮ್ಮಿತು, ವಿಜಯಕಾಂತ್ ವಿರೋಧ ಪಕ್ಷದ ನಾಯಕರಾದರು. ಆದರೆ, ಇದಾದ ನಂತರ 2016 ಮತ್ತು 2021ರ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಅವರ ಪಕ್ಷಕ್ಕೆ ಸಾಧ್ಯವಾಗಲಿಲ್ಲ.
Indian politician and former actor, who was known by his stage name Vijayakanth passed away on December 28. Fondly called ‘Captain’, he was admitted to a private hospital on Thursday due to pneumonia.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am