ಬ್ರೇಕಿಂಗ್ ನ್ಯೂಸ್
28-12-23 02:23 pm HK News Desk ದೇಶ - ವಿದೇಶ
ಗುನಾ, ಡಿ.28: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.
ಈ ಘಟನೆ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಸಜೀವ ದಹನಗೊಂಡು, 17 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗುನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.
ಪ್ರಸ್ತುತ 17 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ, ಬಸ್ ಮತ್ತು ಟ್ರಕ್ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

![]()

ಮೃತದೇಹಗಳು ಬೆಂಕಿಯಲ್ಲಿ ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್ಎ ಪರೀಕ್ಷೆ ನಡೆಸಲಾಗುವುದು. ಅಪಘಾತ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದೆ. ಅಪಘಾತಕ್ಕೆ ಕಾರಣವನ್ನು ಕಂಡುಹಿಡಿಯಲು ಪರಿಶೀಲನೆ ಡೆಯುತ್ತಿದೆ ಎಂದು ಅವರು ಹೇಳಿದರು. ಘಟನೆಯ ಸಮಯದಲ್ಲಿ ಬಸ್ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.
"ನಾವು ಆರೋನ್ ಕಡೆಗೆ ಹೋಗುತ್ತಿದ್ದೆವು. ಡಂಪರ್ಗೆ ಡಿಕ್ಕಿ ಹೊಡೆದ ಸದ್ದು, ಬಾಂಬ್ ಸ್ಫೋಟದಂತೆ ಕೇಳಿಸಿತ್ತು. ಬಸ್ ಉರುಳಿಬಿದ್ದು, ಬೆಂಕಿಯ ಜ್ವಾಲೆ ಎಲ್ಲಾ ಕಡೆ ಆವರಿಸಿತು. ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದರು. ನನ್ನ ಮಗಳನ್ನು ಕಾಪಾಡುವುದು ಸಾಧ್ಯವಾಗಲಿಲ್ಲ" ಎಂದು ಈ ಭಯಾನಕ ಘಟನೆಯಲ್ಲಿ ಮಗಳನ್ನು ಕಳೆದುಕೊಂಡ ಪ್ರಯಾಣಿಕ ಶ್ರೀರಾಮ್ ಓಝಾ ಕಣ್ಣೀರಿಟ್ಟರು.
At least 12 people were killed after a passenger bus caught fire following its collision with a dumper in Madhya Pradesh's Guna. The accident happened in the wee hours of Thursday on the Guna-Aaron road.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm