ಬ್ರೇಕಿಂಗ್ ನ್ಯೂಸ್
29-12-23 01:02 pm HK News Desk ದೇಶ - ವಿದೇಶ
ಮುಂಬೈ, ಡಿ.29: ಮುಂಬೈ ಮೂಲದ ಮುಸ್ಲಿಂ ಯುವತಿಯೊಬ್ಬರು ಕಾಲ್ನಡಿಗೆಯಲ್ಲೇ ರಾಮನ ಜನ್ಮಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ರಾಮನ ಮೇಲಿನ ಭಕ್ತಿ ಮತ್ತು ಮತ ಸೌಹಾರ್ದಕ್ಕಾಗಿ ಪಾದಯಾತ್ರೆ ಕೈಗೊಂಡಿರುವ ಶಬನಮ್ ಈಗ ಸೋಶಿಯಲ್ ಮೀಡಿಯಾದಲ್ಲಿ ಐಕಾನ್ ಆಗಿದ್ದಾರೆ.
ಶಬನಮ್ ತನ್ನ ಗೆಳೆಯರಾದ ರಮಣ್ ರಾಜ್ ಶರ್ಮಾ ಮತ್ತು ವಿನೀತ್ ಪಾಂಡೆ ಜೊತೆಯಲ್ಲಿ ಮುಂಬೈನಿಂದ 1,425 ಕಿಲೋಮೀಟರ್ ದೂರದ ಅಯೋಧ್ಯೆಗೆ ಕಾಲ್ನಡಿಗೆ ಮೂಲಕವೇ ತಲುಪಲು ಹೊರಟಿದ್ದಾರೆ. ಶಬನಮ್ ಮುಸ್ಲಿಂ ಧರ್ಮೀಯರಾಗಿದ್ದರೂ, ಭಗವಾನ್ ರಾಮನ ಮೇಲೆ ಭಕ್ತಿ ಹೊಂದಿದ್ದಾರೆ. ಶಬನಮ್ ಈಗ ಮಧ್ಯಪ್ರದೇಶದ ಸಿಂಧವಾ ಜಿಲ್ಲೆ ತಲುಪಿದ್ದು ಪ್ರತಿದಿನ 25-30 ಕಿಲೋಮೀಟರ್ ಪಾದಯಾತ್ರೆ ಮಾಡುತ್ತಿದ್ದಾರೆ.

ಸುದೀರ್ಘ ಕಾಲ್ನಡಿಗೆ ಯಾತ್ರೆಯ ದಣಿವಿನ ಹೊರತಾಗಿಯೂ, ಮೂವರು ಕೂಡ ತಮ್ಮನ್ನು ರಾಮನ ಮೇಲಿನ ಭಕ್ತಿಯೇ ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಹೇಳಿದ್ದಾರೆ. ಈ ಮೂವರು ಈಗಾಗಲೇ ಮಧ್ಯಪ್ರದೇಶದ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಮನ ಆರಾಧನೆಯು ಯಾವುದೇ ನಿರ್ದಿಷ್ಟ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಗಡಿ, ಭಾಷೆ, ಧರ್ಮಗಳನ್ನು ಮೀರಿದೆ. ಇಡೀ ಜಗತ್ತನ್ನು ಒಳಗೊಳ್ಳುತ್ತಿದೆ. ಭಗವಾನ್ ರಾಮನು ಜಾತಿ ಅಥವಾ ಧರ್ಮವನ್ನು ಮೀರಿ ಎಲ್ಲರಿಗೂ ಸೇರಿದವನು ಎಂದು ಶಬನಮ್ ದೃಢವಾಗಿ ಹೇಳುತ್ತಾರೆ. ಶಬನಮ್ ಯಾತ್ರೆಗೆ ಯಾವುದೇ ಸಮಸ್ಯೆಯಿಲ್ಲ. ಆಕೆಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ, ಊಟ ಮತ್ತು ವಸತಿ ವ್ಯವಸ್ಥೆಯಲ್ಲಿ ಪೊಲೀಸರು ಸಾಥ್ ನೀಡಿದ್ದಾರೆ. ಮಹಾರಾಷ್ಟ್ರದ ಸೂಕ್ಷ್ಮ ಪ್ರದೇಶಗಳ ಮೂಲಕ ಹಾದುಹೋಗುವಾಗ ಪೊಲೀಸರು ರಕ್ಷಣೆಯನ್ನೂ ನೀಡಿದ್ದಾರೆ.
ಮುಸ್ಲಿಂ ಮಹಿಳೆ ಶಬನಮ್ ನಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಅನೇಕ ಮುಸ್ಲಿಮರು ಶಬನಮ್ ಅವರಿಗೆ ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ. ಮತ ಸೌಹಾರ್ದ ಸಾರುವುದಕ್ಕಾಗಿ ಮಹಿಳೆಯ ದಿಟ್ಟ ನಡಿಗೆ ಎಂದು ಹೇಳಿದ್ದಾರೆ.
In a tale that challenges stereotypes and exemplifies the universal nature of faith, Shabnam, a young Muslim woman from Mumbai, has embarked on a journey from Mumbai to Ayodhya. Accompanied by her companions, Raman Raj Sharma and Vineet Pandey, Shabnam set out to cover a distance of 1,425 kilometres on foot.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm