ಬ್ರೇಕಿಂಗ್ ನ್ಯೂಸ್
29-12-23 07:44 pm HK News Desk ದೇಶ - ವಿದೇಶ
ಲಕ್ನೋ, ಡಿ.29: ಮುಸ್ಲಿಂ ಮಹಿಳೆಯನ್ನು ಮದುವೆಯಾಗುವುದಕ್ಕಾಗಿ ಮತಾಂತರಗೊಂಡ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ಹುದ್ದೆಯಲ್ಲಿದ್ದ ಆಶಿಷ್ ಗುಪ್ತಾ ಎಂಬಾತನನ್ನು ಉತ್ತರ ಪ್ರದೇಶ ಸರಕಾರ ಸರ್ಕಾರಿ ಹುದ್ದೆಯಿಂದ ವಜಾ ಮಾಡಿದೆ.
ಉತ್ತರ ಪ್ರದೇಶದ ಮೌಧಾ ಜಿಲ್ಲೆಯಲ್ಲಿ ತಹಸೀಲ್ದಾರ್ ಆಗಿದ್ದ ಆಶಿಷ್ ಗುಪ್ತಾ ಎಂಬಾತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ತನ್ನ ಧರ್ಮವನ್ನೇ ಬದಲಿಸಿದ್ದು, ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಮೊಹಮ್ಮದ್ ಯೂಸುಫ್ ಎಂದು ಬದಲಿಸಿಕೊಂಡಿದ್ದ. ಆಮೂಲಕ ಸರ್ಕಾರಿ ಸೇವೆಯಲ್ಲಿದ್ದು ಸೇವಾ ನಿಮಯಗಳನ್ನು ಉಲ್ಲಂಘಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿ ಅರುಣ್ ಮಿಶ್ರಾ ಅವರು ಆಶಿಷ್ ಗುಪ್ತಾನನ್ನು ತಹಸೀಲ್ದಾರ್ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ತಹಸೀಲ್ದಾರ್ ಆಶಿಷ್ ಗುಪ್ತಾ ಬಗ್ಗೆ ಆರೋಪ ಕೇಳಿಬಂದಿತ್ತು. ಮೊಹಮ್ಮದ್ ಯೂಸುಫ್ ಹೆಸರಲ್ಲಿ ಈ ವ್ಯಕ್ತಿ ಅಲ್ಲಿನ ಮಸೀದಿಗೆ ತೆರಳುತ್ತಿದ್ದುದನ್ನು ಅಲ್ಲಿನವರು ವಿರೋಧಿಸಿದ್ದರು. ಮುಸ್ಲಿಂ ಅಲ್ಲದ ವ್ಯಕ್ತಿ ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾನೆಂದು ಮಸೀದಿ ಸದಸ್ಯ ಮೊಹಮ್ಮದ್ ಆಶಿಕ್, ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆಯೇ ಆಶಿಷ್ ಗುಪ್ತಾನ ಅಸಲಿ ಪತ್ನಿ ಆರತಿ ಪೊಲೀಸ್ ದೂರು ನೀಡಿದ್ದು ತನ್ನ ಪತಿ ಮತಾಂತರಗೊಂಡ ಬಗ್ಗೆ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಗೆ ಮುಸ್ಲಿಂ ಮಹಿಳೆಯರೊಂದಿಗೆ ಸಂಬಂಧ ಇದೆ. ತನ್ನ ಪತಿಯನ್ನು ಬಲವಂತದಿಂದ ಮತಾಂತರ ಮಾಡಿದ್ದಾರೆಂದು ದೂರು ನೀಡಿದ್ದಳು.
ಅಲ್ಲದೆ, ಇತರ ಮೂವರು ಆರೋಪಿಗಳ ಬಗ್ಗೆಯೂ ಆರತಿ ದೂರಿನಲ್ಲಿ ಹೇಳಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಷ್ ಗುಪ್ತಾನ ಜೊತೆಗೆ ಸಂಪರ್ಕ ಹೊಂದಿದ್ದ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುವುದಕ್ಕಾಗಿ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ.
The wife of a revenue official has filed a police complaint alleging that her husband, Ashish Gupta, converted to Islam, changed his name to Mohammad Yusuf, and married a Muslim woman in the southern Uttar Pradesh town of Maudaha.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am