ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm