ಬ್ರೇಕಿಂಗ್ ನ್ಯೂಸ್
03-01-24 11:07 am HK News Desk ದೇಶ - ವಿದೇಶ
ಅಸ್ಸಾಂ, ಜ 03: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ಧ ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ದುರ್ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇರ್ಗಾಂವ್ ಬಳಿಯ ಬಲಿಜಾನ್ ಎಂಬಲ್ಲಿ 45 ಜನರಿದ್ದ ಬಸ್, ಸರಕು ಸಾಗಣೆ ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೇನ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.


'ಅಪಘಾತದಲ್ಲಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಅವರು ಹೇಳಿದ್ದಾರೆ.
ಅಪಘಾತ ಸಂಬಂಧ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ಸಿಂಗ್ ಹೇಳಿದರು.
ಗಾಯಗೊಂಡ 30 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಮುಂಜಾನೆ 4:30ರ ಸುಮಾರಿಗೆ ಗೋಲಾಘಾಟ್ನ ಕಮರ್ಗಾಂವ್ನಿಂದ ಪಿಕ್ನಿಕ್ಗಾಗಿ ತಿನ್ಸುಕಿಯಾ ಜಿಲ್ಲೆಯ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದ ಬಸ್, ಟ್ರಕ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
STORY | 12 killed in bus-truck collision in Assam
— Press Trust of India (@PTI_News) January 3, 2024
READ: https://t.co/RIFKRE42J8
VIDEO: pic.twitter.com/Mdrh8gSZUx
At least 12 people were killed and around 30 others injured on Wednesday in a head-on collision between a coal-laden truck and a bus in Golaghat district of Assam, police said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am