ಬ್ರೇಕಿಂಗ್ ನ್ಯೂಸ್
03-01-24 01:40 pm HK News Desk ದೇಶ - ವಿದೇಶ
ಕಾಬೂಲ್, ಜ 03: ಜಪಾನ್ನಲ್ಲಿ ಪ್ರಬಲ ಭೂಕಂಪನಕ್ಕೆ ಸುನಾಮಿ ಉಂಟಾಗಿ 50 ಕ್ಕೂ ಅಧಿಕ ಜನರು ಸಾವಿಗೀಡಾದ ಘಟನೆ ಬೆನ್ನಲ್ಲೇ, ಭಾರತದ ಕೆಲ ಭಾಗ ಮತ್ತು ಅಫ್ಘಾನಿಸ್ತಾನದಲ್ಲಿ ಕೂಡ ಭೂಮಿ ನಡುಗಿದೆ. ಕಡಿಮೆ ತೀವ್ರತೆಯ ಕಂಪನಗಳು ಕಂಡುಬಂದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮಂಗಳವಾರ ರಾತ್ರಿ 10.35 ನಿಮಿಷಕ್ಕೆ ಪಶ್ಚಿಮ ಬಂಗಾಳದ ಅಲಿಪುರ್ದೂರ್ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್ಎಸ್ಸಿ) ತಿಳಿಸಿದೆ. ಭೂಕಂಪವು ರಾತ್ರಿ ವೇಳೆ ಆಗಿದ್ದು, 5 ಕಿಮೀ ಆಳದಲ್ಲಿ ಕಂಪನದ ಅಲೆಗಳು ಎದ್ದಿವೆ. ಯಾವುದೇ ದೊಡ್ಡ ಪ್ರಮಾಣದಲ್ಲಿ ಸಂಭವಿಸಿಲ್ಲ. ಭೂಮಿ ನಡುಗಿದಾಗ ಜನರು ಮನೆಯಿಂದ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.

ಇತ್ತ ಮಣಿಪುರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪವು ಉಖ್ರುಲ್ ಪ್ರದೇಶದಲ್ಲಿ ಮಧ್ಯರಾತ್ರಿ 12.01 ನಿಮಿಷಕ್ಕೆ ಸಂಭವಿಸಿದೆ. ಜನರು ನಿದ್ರೆಯಲ್ಲಿದ್ದಾಗ ದಿಢೀರ್ ಭೂಮಿ ಅಲುಗಾಡಿದೆ. ಇದರಿಂದ ಗಾಬರಿಯಾದ ಜನರು ಕೆಲಕಾಲ ಆತಂಕಕ್ಕೀಡಾಗಿದ್ದರು. ಮನೆಯಲ್ಲಿ ಪಾತ್ರೆಗಳು ನೆಲಕ್ಕುರುಳಿ ಬಿದ್ದಿವೆ. ಹಠಾತ್ ನಡುಕದಿಂದ ಜನರು ನಿದ್ದೆಗೆಡುವಂತಾಗಿದೆ. ಉಕ್ರುಲ್ ಪ್ರದೇಶದ ಸುತ್ತಲ್ಲೂ ಬುಧವಾರ ಮಧ್ಯರಾತ್ರಿ 26 ಕಿ.ಮೀ ಆಳದಲ್ಲಿ ಕಂಪನದ ಅಲೆಗಳು ಕಂಡುಬಂದಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಬುಧವಾರ ಅರ್ಧಗಂಟೆ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ಮೊದಲು ನಗರದಿಂದ 126 ದೂರದ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಮಿ ನಡುಗಿದೆ. ಭೂಮಿಯ 80 ಕಿಮೀ ಆಳದಲ್ಲಿ ಅದರ ಕಂಪನಗಳು ಸೃಷ್ಟಿಯಾಗಿವೆ. ಇದು ಮಧ್ಯರಾತ್ರಿ 12.28 ರ ಸುಮಾರಿನಲ್ಲಿ ಜರುಗಿದೆ. ಇದಾದ ಅರ್ಧಗಂಟೆಯ ಅಂತರದಲ್ಲಿ ಫೈಜಾಬಾದ್ನ 100 ದೂರ ಪ್ರದೇಶದಲ್ಲಿ 12.55 ನಿಮಿಷಕ್ಕೆ ಮತ್ತೊಂದು ಕಂಪನ ಉಂಟಾಗಿದೆ.

4.8 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಈ ಬಾರಿ ಇದು 100 ಕಿಮೀ ಆಳದಲ್ಲಿ ಕಂಡುಬಂದಿದೆ. ಕಡಿಮೆ ಸಮಯದಲ್ಲಿ ಎರಡು ಲಘು ಕಂಪನಗಳು ಉಂಟಾಗಿದ್ದು, ಜನರನ್ನು ತೀವ್ರ ಆತಂಕಕ್ಕೆ ತಳ್ಳಿದ್ದವು. ಸದ್ಯಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ ಅಫ್ಘಾನಿಸ್ತಾನದ ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Two earthquakes of magnitude jolted Afghanistan's Fayzabad on Wednesday, the National Centre for Seismology (NCS) reported. The first quake took place at 00:28:52 IST at a depth of 80 km, 126km E of Fayzabad.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am