ಬ್ರೇಕಿಂಗ್ ನ್ಯೂಸ್
08-01-24 04:27 pm HK News Desk ದೇಶ - ವಿದೇಶ
ನವದೆಹಲಿ, ಜ.8: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಚುನಾವಣೆ ಹೊತ್ತಲ್ಲಿ ಕೋರ್ಟ್ ನೀಡಿರುವ ಆದೇಶ ಗುಜರಾತ್ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ.
ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್ ಬಾನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್ ಬಿ.ವಿ.ನಾಗರತ್ನ ಮತ್ತು ಜಸ್ಟೀಸ್ ಉಜ್ಜಾಲ್ ಭುವನ್ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. 2002ರಲ್ಲಿ ಗುಜರಾತ್ ನ ಗೋಧ್ರಾದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ 7 ಮಂದಿ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ 11 ಮಂದಿ ದೋಷಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ಆದರೆ ಗುಜರಾತ್ ಸರ್ಕಾರ 2022ರಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆಗೊಳಿಸಲು ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಆ ರೀತಿಯ ಆದೇಶವನ್ನು ಜಾರಿಗೊಳಿಸುವ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ. ಇದೊಂದು ವಂಚನೆ ಕೃತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಲ್ಲದೆ, 11 ಅಪರಾಧಿಗಳು ಎರಡು ವಾರದೊಳಗೆ ಶರಣಾಗಿ, ಜೈಲಿಗೆ ಮರಳಬೇಕು ಎಂದು ತೀರ್ಪಿನಲ್ಲಿ ಸೂಚಿಸಿದೆ. ಅಪರಾಧಿಗಳ ಶೀಘ್ರ ಬಿಡುಗಡೆಯ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ. ಬದಲಿಗೆ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಪರಿಶೀಲನೆ ನಡೆಸಬಹುದು, ಯಾಕೆಂದರೆ ಆರೋಪಿಗಳ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ. ಗುಜರಾತ್ ನಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದೆ.
ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ 11 ಅಪರಾಧಿಗಳನ್ನು ಜೀವಾವಧಿ ಶಿಕ್ಷೆಯ 14 ವರ್ಷ ಪೂರ್ತಿಗೊಳಿಸಿದ್ದಾರೆಂದು ಹೇಳಿ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.
In a highly anticipated judgment, the Supreme Court on Monday (January 8) set aside the remission of 11 convicts sentenced to life imprisonment for multiple murders and gang rapes, including that of Bilkis Bano, during the 2002 communal riots in Gujarat.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm