ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm