ಬ್ರೇಕಿಂಗ್ ನ್ಯೂಸ್
11-01-24 09:03 pm HK News Desk ದೇಶ - ವಿದೇಶ
ಮುಂಬೈ, ಜ.11: ಇತ್ತ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದರೆ, ಇತ್ತೀಚೆಗೆ ಬಿಡುಗಡೆಯಾದ 'ಅನ್ನಪೂರ್ಣಿ' ಸಿನಿಮಾದಲ್ಲಿ ರಾಮನನ್ನೇ ಅಣಕಿಸಿ ಚಿತ್ರೀಕರಿಸಿದ ಆರೋಪ ಕೇಳಿಬಂದಿದ್ದು ಭಾರೀ ವಿವಾದಕ್ಕೆ ತುತ್ತಾಗಿದೆ. ಚಿತ್ರದಲ್ಲಿ ಹಿಂದು ಭಾವನೆಗೆ ಧಕ್ಕೆ ತರಲಾಗಿದೆ ಎಂದು ಹಿಂದು ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ದೂರುಗಳನ್ನು ನೀಡಿದ್ದಾರೆ.
ಚಿತ್ರದಲ್ಲಿ ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗಿದ್ದು, ಲವ್ ಜಿಹಾದ್ ಅನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಲಾಗಿದೆ. 'ಅನ್ನಪೂರ್ಣಿ' ಸಿನಿಮಾ ಇತ್ತೀಚೆಗಷ್ಟೇ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿತ್ತು. ವಿವಾದ ಕೇಳಿಬಂದ ಬೆನ್ನಲ್ಲೇ ನೆಟ್ ಫ್ಲಿಕ್ಸ್ ನಿಂದ ಚಿತ್ರವನ್ನು ತೆಗೆದು ಹಾಕಲಾಗಿದೆ. ವಿವಾದ ಕುರಿತಾಗಿ ಝೀ ಸ್ಟುಡಿಯೋ ಕ್ಷಮೆ ಕೇಳಿ ಹೇಳಿಕೆ ಬಿಡುಗಡೆ ಮಾಡಿದ್ದು ವಿವಾದಿತ ದೃಶ್ಯಗಳನ್ನು ತೆಗೆದುಹಾಕದೆ ಚಿತ್ರವನ್ನು ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರ ಮಾಡುವುದಿಲ್ಲ ಎಂದು ಹೇಳಿದೆ.
ಹಿಂದೂ ಐಟಿ ಸೆಲ್ ಸಂಸ್ಥಾಪಕ ರಮೇಶ್ ಸೋಲಂಕಿ ಅವರು ದಕ್ಷಿಣ ಮುಂಬೈನ ಲೋಕಮಾನ್ಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ. ಅವರ ದೂರಿನ ಪ್ರಕಾರ, 'ಅನ್ನಪೂರ್ಣಿ' ಚಿತ್ರವು ಭಗವಾನ್ ರಾಮನನ್ನು ಅವಮಾನಿಸುತ್ತದೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ದೂರಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಸಿನಿಮಾದ ಕೆಲವು ದೃಶ್ಯಗಳನ್ನೂ ಸೋಲಂಕಿ ಉಲ್ಲೇಖಿಸಿದ್ದಾರೆ.
ಚಿತ್ರದಲ್ಲಿ ದೇವಸ್ಥಾನದ ಅರ್ಚಕರ ಮಗಳಾಗಿರುವ ನಯನತಾರಾ ಅವರು ಬಿರಿಯಾನಿ ಮಾಡುವ ಮುನ್ನ 'ಹಿಜಾಬ್' ಧರಿಸಿ ನಮಾಜ್ ಮಾಡುವುದನ್ನು ತೋರಿಸುತ್ತದೆ. ಮತ್ತೊಂದು ದೃಶ್ಯದಲ್ಲಿ, ನಯನತಾರಾ ಪಾತ್ರದ ಸ್ನೇಹಿತ ಫರ್ಹಾನ್, ಮಾಂಸವನ್ನು ಕತ್ತರಿಸಲು ಆಕೆಯ ಬ್ರೈನ್ ವಾಶ್ ಮಾಡುತ್ತಾನೆ ಮತ್ತು ಭಗವಾನ್ ಶ್ರೀರಾಮ ಮತ್ತು ಸೀತೆ ಕೂಡ ಮಾಂಸ ಸೇವಿಸಿದ್ದಾರೆ ಎಂದು ಹೇಳುತ್ತಾರೆ. ಅಲ್ಲದೆ, ನಯನತಾರಾ ಪಾತ್ರ ದೇವಸ್ಥಾನಕ್ಕೆ ಹೋಗದೆ, ಫರ್ಹಾನ್ನ ಜಾಗಕ್ಕೆ 'ಇಫ್ತಾರಿ'ಗೆ ಹೋಗುವ ದೃಶ್ಯವನ್ನು ಉಲ್ಲೇಖಿಸಿ ದೂರಿನಲ್ಲಿ ಆಕ್ಷೇಪಿಸಿದ್ದಾರೆ.
A police case has been filed against actor Nayanthara for allegedly hurting religious sentiments of Hindus, disrespecting Lord Ram and promoting 'love jihad' through the film 'Annapoorani'. The case was filed by a right-wing outfit in Madhya Pradesh.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am