ಬ್ರೇಕಿಂಗ್ ನ್ಯೂಸ್
11-01-24 10:43 pm HK News Desk ದೇಶ - ವಿದೇಶ
ನವದೆಹಲಿ, ಜ.11: ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಮಂದಿರದಲ್ಲಿ ರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಮಾಡುವುದು ಶಾಸ್ತ್ರಕ್ಕೆ ವಿರುದ್ಧ ಎಂದು ಉತ್ತರಾಖಂಡದ ಜ್ಯೋತಿರ್ಮಠದ ಪೀಠಾಧೀಶ ಶಂಕರಾಚಾರ್ಯ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ಆಮೂಲಕ ರಾಮ ಮಂದಿರ ಉದ್ಘಾಟನೆ ಬಗ್ಗೆ ಸನಾತನ ಧರ್ಮದ ಪ್ರಮುಖ ಹಿಂದು ಪೀಠಗಳೇ ವಿರೋಧ ವ್ಯಕ್ತಪಡಿಸಿದಂತಾಗಿದೆ.
ಮಂದಿರ ಉದ್ಘಾಟನೆಯ ಸಮಾರಂಭವನ್ನು ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ದೇವಾಲಯದ ನಿರ್ಮಾಣ ಕೆಲಸ ಅಪೂರ್ಣ ಆಗಿರುವುದರಿಂದ ಇದರ ನಡುವೆ ಪ್ರಾಣ ಪ್ರತಿಷ್ಠೆ ಮಾಡುವುದು ಶಾಸ್ತ್ರಗಳಿಗೆ ವಿರುದ್ಧವಾಗುತ್ತದೆ ಎಂದು ಮಠದ ಅಧಿಕೃತ ಸೋಶಿಯಲ್ ಮೀಡಿಯಾ ಟ್ವಿಟರ್ ಖಾತೆಯಲ್ಲಿ ವೀಡಿಯೊ ಮೂಲಕ ಅವರು ಹೇಳಿದ್ದಾರೆ.
ನಾಲ್ಕು ಜ್ಯೋತಿರ್ಮಠಗಳು 8ನೇ ಶತಮಾನದ ಆಚಾರ್ಯ ಆದಿಶಂಕರರಿಂದ ಸ್ಥಾಪಿಸಲ್ಪಟ್ಟವುಗಳು. ಹಿಂದೂ ಧರ್ಮದ ಅದ್ವೈತ ವೇದಾಂತ ಸಂಪ್ರದಾಯವನ್ನು ಈ ನಾಲ್ಕು ಮಠಗಳು ಪ್ರತಿಪಾದಿಸುತ್ತವೆ. ಈಗ ಉತ್ತರಾಖಂಡದ ಜೋಶಿಮಠದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೆರಡು ಮಠಗಳೆಂದರೆ ಕರ್ನಾಟಕದ ಶೃಂಗೇರಿಯ ಶ್ರೀ ಶಾರದಾ ಪೀಠ ಮತ್ತು ಗುಜರಾತಿನ ದ್ವಾರಕಾ ಶಾರದಾ ಪೀಠ. ಈ ಪೈಕಿ ಶೃಂಗೇರಿ ಪೀಠದ ಸ್ವಾಮಿಗಳು ತಾವು ರಾಮ ಮಂದಿರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.
ಹಾಗೆಂದು, ನಾವು ಪ್ರಧಾನಿ ಮೋದಿ ವಿರೋಧಿಗಳಲ್ಲ. ಆದರೆ ಧರ್ಮಕ್ಕೆ ವಿರುದ್ಧವಾಗಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಬಾರದು. ರಮಾನಂದ ಸಂಪ್ರದಾಯದ ಪ್ರಕಾರ ಮಾಡುವುದಾದರೆ ಚಂಪತ್ ರಾಯ್, ನೃಪೇಂದ್ರ ಮಿಶ್ರಾ ಟ್ರಸ್ಟ್ ಸ್ಥಾನಗಳಿಗೆ ರಾಜೀನಾಮೆ ನೀಡಲಿ. ಅಯೋಧ್ಯೆಯ ರಾಮಮಂದಿರವನ್ನು ರಮಾನಂದ ಸಂಪ್ರದಾಯದವರಿಗೆ ವಹಿಸಲಿ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದ್ದಾರೆ.
ಪುರಿಯ ಶಂಕರಾಚಾರ್ಯ ಪೀಠದ ನಿಶ್ವಲಾನಂದ ಸ್ವಾಮೀಜಿ ಕೂಡ ಪ್ರಾಣ ಪ್ರತಿಷ್ಠಾಪನೆಗೆ ಗೈರಾಗಲಿದ್ದಾರೆ. ನಮಗೆ ಮಂದಿರ ಲೋಕಾರ್ಪಣೆಗೆ ಆಹ್ವಾನ ಬಂದಿದೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಲ್ಲ. ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿಲ್ಲ. ಇದಕ್ಕೆ ನಮ್ಮ ಸಹಮತಿ ಇಲ್ಲ. ಶಾಸ್ತ್ರ, ಧಾರ್ಮಿಕ ವಿಧಿ ವಿಧಾನಗಳು ಸರಿಯಾಗಿ ನಡೆಯಬೇಕು. ಹೀಗಾಗಿ ಜನವರಿ 22ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ನಿಶ್ಚಲಾನಂದ ಸ್ವಾಮೀಜಿ ಹೇಳಿದ್ದಾರೆ.
Swami Avimukteshwaranand Saraswati, the shankaracharya of Jyotishpeeth in Uttarakhand, has said the four shankaracharyas will not attend the January 22 inauguration of the Ram temple in Ayodhya because it is being held in violation of the rules of Sanatan Dharma.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am