ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm