ಬ್ರೇಕಿಂಗ್ ನ್ಯೂಸ್
22-01-24 01:15 pm Hk News Desk ದೇಶ - ವಿದೇಶ
ಅಯೋಧ್ಯೆ, ಜ.22: ಕೋಟಿ ಕಂಗಳ ಕನಸು, ಜಗತ್ತಿನಾದ್ಯಂತ ಭಕ್ತರ ನಿರೀಕ್ಷೆಯಂತೆ ಅಯೋಧ್ಯಾ ಪುರಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ನೆರವೇರಿದೆ.
12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ ಪ್ರವೇಶ ಮಾಡಿದ ಮೋದಿ, ಎರಡು ಮಂಟಪದಲ್ಲಿ ಪೂಜೆ ನೆರವೇರಿಸಿದರು. ಪ್ರತಿಷ್ಠಾ ಕಾರ್ಯ ನೆರವೇರುತ್ತಿದ್ದಂತೆ ಮೊದಲ ಬಾರಿಗೆ ಸರ್ವಾಲಂಕೃತ ಬಾಲರಾಮನ ಮೂರ್ತಿಯನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು.








ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು 11 ಗಂಟೆ ವೇಳೆಗೆ ಆರಂಭಗೊಂಡಿತ್ತು. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆಯ ಪೂಜಾ ಕಾರ್ಯ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ. ಮೋದಿ ಮತ್ತು ಮೋಹನ್ ಭಾಗವತ್ ಸ್ವತಃ ಹೂವಿನ ಅಭಿಷೇಕ ಮತ್ತು ಆರತಿ ಎತ್ತಿ ಪೂಜೆ ನೆರವೇರಿಸಿದ್ದಾರೆ. ಆಚಾರ್ಯ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ ದೀಕ್ಷಿತ್ ನೇತೃತ್ವದಲ್ಲಿ ನೂರಾರು ರಿತ್ವಿಜರು ಪ್ರತಿಷ್ಠಾ ಪೂಜಾ ಕೈಂಕರ್ಯ ನಡೆಸಿದ್ದಾರೆ.
ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಂಡಿದ್ದಾರೆ. ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ. ನೂರಾರು ಕಡೆ ಹಿಂದು ಸಂಘಟನೆಗಳ ವತಿಯಿಂದ ರಾಮ ತಾರಕಯಜ್ಞ ನೆರವೇರಿದೆ
‘Mukhya Yajman’ Prime Minister Narendra Modi leads ‘Pran Pratishtha’ rituals at Ram temple inauguration. See pictures from the ceremony here.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am