ಬ್ರೇಕಿಂಗ್ ನ್ಯೂಸ್
23-01-24 09:56 pm HK News Desk ದೇಶ - ವಿದೇಶ
ನವದೆಹಲಿ, ಜ.23: ಬಿಹಾರದ ಮಾಜಿ ಮುಖ್ಯಮಂತ್ರಿ, ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಸಮತಾವಾದ ಪ್ರತಿಪಾದನೆ ಮಾಡಿದ್ದ ಅಗ್ರ ನಾಯಕನಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ. ಬುಧವಾರ ಕರ್ಪೂರಿ ಠಾಕೂರ್ ಅವರ 100ನೇ ಜನ್ಮದಿನಾಚರಣೆ. ಅದಕ್ಕೂ ಮುನ್ನ ರಾಷ್ಟ್ರಪತಿ ಭವನ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದೆ. ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿತ್ತು. ಕೇಂದ್ರ ಸರ್ಕಾರ ಈ ಘೋಷಣೆ ಮಾಡುತ್ತಿದ್ದಂತೆ ಜೆಡಿಯು ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಕರ್ಪೂರಿ ಠಾಕೂರ್ ಬಿಹಾರದ ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರು ಗಳಿಸಿದ್ದರು. ಕರ್ಪೂರಿ ಅವರು ಎರಡು ಬಾರಿ ಬಿಹಾರದ ಉಪ ಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು.
ಠಾಕೂರ್ ಅವರಿಗೆ 'ಭಾರತ ರತ್ನ' ಪುರಸ್ಕಾರ ಲಭಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ಸಾಮಾಜಿಕ ನ್ಯಾಯದ ಶ್ರೇಷ್ಠ ಐಕಾನ್ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲು ನಿರ್ಧರಿಸಿದ್ದೇವೆ. ಅವರ ಜನ್ಮ ಶತಮಾನೋತ್ಸವ ಆಚರಿಸುತ್ತಿರುವ ಸಮಯದಲ್ಲಿ ಈ ನಿರ್ಧಾರ ದೇಶದ ಜನರಿಗೆ ಹೆಮ್ಮೆ ತರುತ್ತದೆ ಎಂದಿದ್ದಾರೆ.
ಅವಕಾಶ ವಂಚಿತರ ಉನ್ನತಿಗಾಗಿ ಕರ್ಪೂರಿ ಅವರ ಅಚಲ ಬದ್ಧತೆ ಮತ್ತು ದೂರದೃಷ್ಟಿಯ ನಾಯಕತ್ವವು ಭಾರತದ ಸಾಮಾಜಿಕ-ರಾಜಕೀಯ ಸನ್ನಿವೇಶದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಮಾಜದಲ್ಲಿ ಸಾಮರಸ್ಯವನ್ನು ಇನ್ನಷ್ಟು ಉತ್ತೇಜಿಸಲು ಅವರ ಧ್ಯೇಯವು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Two-time Bihar chief minister Karpoori Thakur, considered the fountainhead of OBC politics in Bihar, has been named for the country's highest civilian award Bharat Ratna posthumously, a Rashtrapati Bhawan communique said on Tuesday on the eve of his birth centenary.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am