ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm