ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am