ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm