ಬ್ರೇಕಿಂಗ್ ನ್ಯೂಸ್
24-01-24 06:24 pm HK News Desk ದೇಶ - ವಿದೇಶ
ಒಡಿಶಾ, ಜ 24: ನಾಟಕ ತಂಡ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಆರು ಜನರು ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 49ರ ಧರ್ಸುನಿ ಘಾಟ್ನಲ್ಲಿ ನಡೆದಿದೆ. ಗಾಯಾಳುಗಳನ್ನು ಪಿಆರ್ಎಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸರ ಮಾಹಿತಿಯ ಪ್ರಕಾರ, ಟ್ರಕ್ ರಾಯರಂಗಪುರದಿಂದ ಜಲೇಶ್ವರಕ್ಕೆ ತೆರಳುತ್ತಿತ್ತು. ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ರಕ್ ಧರ್ಸುನಿ ಘಾಟ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕೊನೆಯ ತಿರುವಿನಲ್ಲಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟ್ರಕ್ನಲ್ಲಿದ್ದವರು 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದಾರೆ. ಇನ್ನು ಟ್ರಕ್ನಲ್ಲಿ ಧೌಲಿ ಗಣನಾಟ್ಯ ನಾಟಕ ತಂಡದ 15ಕ್ಕೂ ಹೆಚ್ಚು ಸದಸ್ಯರು ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ.

ತಕ್ಷಣ ಘಟನಾ ಸ್ಥಳಕ್ಕೆ ಬಂಗಿರಿಪೋಶಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕರ ಸಂಕ್ರಾಂತಿ ಮತ್ತು ತುಸು ಹಬ್ಬ (ಆದಿವಾಸಿಗಳ ಹಬ್ಬ) ನಿಮಿತ್ತ ಮಯೂರಭಂಜ್ನ ರಾಯರಂಗಪುರದ ಬಲ್ಡಾ ಬ್ಲಾಕ್, ಬಾಸಿಂಗಿ ಗ್ರಾಮದಲ್ಲಿ ‘ಧೌಲಿ ಗಣನಾಟ್ಯ’ ನಾಟಕ ನಡೆಸಿ, ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.
At least six people died and nine others were injured on Wednesday after a truck carrying them overturned amid heavy rain in Mayurbhanj district, police said. The accident took place at Dharsuni ghat area on National Highway-49 in the morning, they said. The driver managed to escape from the spot, a police officer said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm