ಬ್ರೇಕಿಂಗ್ ನ್ಯೂಸ್
24-01-24 09:30 pm HK News Desk ದೇಶ - ವಿದೇಶ
ಮಾಸ್ಕೊ, ಜ.24: ಉಕ್ರೇನ್ನ 65 ಯುದ್ಧ ಕೈದಿಗಳು ಸೇರಿದಂತೆ 74 ಜನರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನವು ಉಕ್ರೇನ್ ಬಳಿಯ ಗಡಿ ಪ್ರದೇಶದ ಪ್ರಾಂತ್ಯದಲ್ಲಿ ಬುಧವಾರ ಪತನಗೊಂಡಿದೆ. ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.
ಆ ವಿಡಿಯೋದಲ್ಲಿ ಬೆಲ್ಗೊರೊಡ್ ಪ್ರಾಂತ್ಯದಲ್ಲಿ ವಿಮಾನವೊಂದು ಪತನಗೊಂಡು ಆಕಾಶದಿಂದ ಬೀಳುವಂತೆ ಕಂಡುಬರುತ್ತಿದೆ. ಬೆಂಕಿಯ ಬೃಹತ್ ಚೆಂಡು ಸ್ಫೋಟಗೊಂಡಿದ್ದು, ಅದು ನೆಲಕ್ಕೆ ಅಪ್ಪಳಿಸಿದೆ. ಈಗಾಗಲೇ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ಗಳು ಮತ್ತು ಪೊಲೀಸರು ಅಪಘಾತದ ಸ್ಥಳಕ್ಕೆ ಧಾವಿಸಿದ್ದಾರೆ.
ಯುದ್ಧದಲ್ಲಿ ಸೆರೆಯಾದ ಉಕ್ರೇನ್ನ 65 ಸೈನಿಕರು ಈ ವಿಮಾನದಲ್ಲಿದ್ದರು. ಇವರೊಂದಿಗೆ 6 ವಿಮಾನ ಸಿಬ್ಬಂದಿ ಮತ್ತು 3 ರಕ್ಷಣಾ ಸಿಬ್ಬಂದಿ ಇದ್ದರು. ಕೈದಿಗಳ ಹಸ್ತಾಂತರ ಪ್ರಕ್ರಿಯೆಗಾಗಿ ಇವರನ್ನು ಬೆಲ್ಗೊರೊಡ್ ಪ್ರಾಂತ್ಯದಲ್ಲಿನ ಉಭಯ ರಾಷ್ಟ್ರಗಳ ಗಡಿ ಪ್ರದೇಶಕ್ಕೆ ಕರೆತರಲಾಗುತ್ತಿತ್ತು ಎಂದು ಸೇನೆ ಮಾಹಿತಿ ನೀಡಿದೆ.
ಬೆಲ್ಗೊರೊಡ್ ಪ್ರದೇಶದಲ್ಲಿ ವಿಮಾನದ ಪತನಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೋವ್ ಅವರು ವಿಮಾನದಲ್ಲಿ ಯಾರಿದ್ದರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಅಲ್ಲದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳದಂತೆ ಉಕ್ರೇನಿಯನ್ ಅಧಿಕಾರಿಗಳು ಇದೇ ವೇಳೆ ಎಚ್ಚರಿಕೆ ಕೂಡಾ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸಲಾಗುತ್ತಿತ್ತು. ಅದನ್ನು ಉಕ್ರೇನ್ ಹೊಡೆದುರುಳಿಸಿದೆ ಎಂದು ಉಕ್ರೇನ್ನ ಸೇನಾ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.



ಉಕ್ರೇನಿಯನ್ ಸಮಾಜವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಶತ್ರುಗಳು ಉಕ್ರೇನ್ ವಿರುದ್ಧ ವಿಶೇಷ ಕಾರ್ಯಾಚರಣೆಗಳನ್ನು ಸಕ್ರಿಯವಾಗಿ ನಡೆಸುತ್ತಿದ್ದಾರೆ'' ಎಂದು ಎಂದು ಗ್ಲಾಡ್ಕೋವ್ ತನ್ನ ಟೆಲಿಗ್ರಾಮ್ ಚಾನೆಲ್ನಲ್ಲಿ ತಿಳಿಸಿದ್ದಾರೆ.
ಸ್ಥಳೀಯ ಸುದ್ದಿಗಾರರೊಂದಿಗೆ ಬೆಳಗ್ಗೆ ಕರೆಯೊಂದರಲ್ಲಿ ಮಾತನಾಡಿರುವ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, ಅಪಘಾತದ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿಲ್ಲದ ಕಾರಣ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದಿದ್ದರು. ರಕ್ಷಣಾ ಪಡೆಗಳು, ಸರಕು, ಮಿಲಿಟರಿ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ವಿಮಾನವನ್ನು ವಿನ್ಯಾಸಗೊಳಿಸಲಾಗಿದೆ. ರಷ್ಯಾದ ಮಿಲಿಟರಿ ರಫ್ತು ಏಜೆನ್ಸಿ ಪ್ರಕಾರ, ಇದು 225 ಸೈನಿಕರನ್ನು ಒಯ್ಯಬಲ್ಲದು ಎಂಬುದು ತಿಳಿದುಬಂದಿದೆ.
Russia accused Ukraine of downing a Russian military plane in the Belgorod region near the Ukrainian border Wednesday, saying all 74 people on board were killed including dozens of Ukrainian servicemen being transported for a prisoner swap.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am