ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm