ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm