ಬ್ರೇಕಿಂಗ್ ನ್ಯೂಸ್
29-01-24 10:20 pm HK News Desk ದೇಶ - ವಿದೇಶ
ನವದೆಹಲಿ, ಜ.29: 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಸಲು ದಿನಾಂಕವನ್ನು ಭಾರತ ಚುನಾವಣೆ ಆಯೋಗ ಪ್ರಕಟಿಸಿದೆ. ಇದರಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯದಿಂದ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 15 ರಾಜ್ಯಗಳಿಂದ ಏಕಕಾಲದಲ್ಲಿ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 9 ಮಂದಿ ಕೇಂದ್ರ ಸಚಿವರ ರಾಜ್ಯಸಭೆ ಅವಧಿ ಎಪ್ರಿಲ್ ವೇಳೆಗೆ ಮುಗಿಯಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನವೂ ಖಾಲಿಯಾಗಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ತಲಾ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಬಲ-ಬಲ ನೋಡುವುದಾದರೆ ಕಾಂಗ್ರೆಸ್ ಪಕ್ಷ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸೇರಿ 137 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 66 ಸ್ಥಾನ, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಹೊಂದಿದೆ.
The Election Commission on Monday notified elections to 56 Rajya Sabha seats that will be held on February 27. The retiree list includes BJP president J.P. Nadda, nine Union Ministers and former Prime Minister Manmohan Singh.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm