ಬ್ರೇಕಿಂಗ್ ನ್ಯೂಸ್
29-01-24 10:20 pm HK News Desk ದೇಶ - ವಿದೇಶ
ನವದೆಹಲಿ, ಜ.29: 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಸಲು ದಿನಾಂಕವನ್ನು ಭಾರತ ಚುನಾವಣೆ ಆಯೋಗ ಪ್ರಕಟಿಸಿದೆ. ಇದರಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯದಿಂದ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 15 ರಾಜ್ಯಗಳಿಂದ ಏಕಕಾಲದಲ್ಲಿ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 9 ಮಂದಿ ಕೇಂದ್ರ ಸಚಿವರ ರಾಜ್ಯಸಭೆ ಅವಧಿ ಎಪ್ರಿಲ್ ವೇಳೆಗೆ ಮುಗಿಯಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನವೂ ಖಾಲಿಯಾಗಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ತಲಾ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಬಲ-ಬಲ ನೋಡುವುದಾದರೆ ಕಾಂಗ್ರೆಸ್ ಪಕ್ಷ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸೇರಿ 137 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 66 ಸ್ಥಾನ, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಹೊಂದಿದೆ.
The Election Commission on Monday notified elections to 56 Rajya Sabha seats that will be held on February 27. The retiree list includes BJP president J.P. Nadda, nine Union Ministers and former Prime Minister Manmohan Singh.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am