ಬ್ರೇಕಿಂಗ್ ನ್ಯೂಸ್
29-01-24 10:27 pm HK News Desk ದೇಶ - ವಿದೇಶ
ಕೊಲ್ಕತ್ತಾ, ಜ.29: ಇನ್ನೊಂದೇ ವಾರದಲ್ಲಿ ಸಿಎಎ ಕಾಯ್ದೆ ದೇಶದಲ್ಲಿ ಜಾರಿಗೆ ಬರಲಿದೆ ಎಂದು ಕೇಂದ್ರ ಹಡಗು ಯಾನ ರಾಜ್ಯ ಸಚಿವ ಶಂತನು ಠಾಕೂರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸೌತ್ ಪರಗಣ ಜಿಲ್ಲೆಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಶಂತನು ಠಾಕೂರ್ ಈ ಮಾತು ಹೇಳಿದ್ದಾರೆ. ಅಲ್ಲದೆ, ಸುದ್ದಿಗಾರರು ಕೇಳಿದ ಪ್ರಶ್ನೆಗೂ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಸಿಎಎ ಕಾನೂನು ದೇಶದಲ್ಲಿ ಕೇವಲ ಏಳು ದಿನಗಳೊಳಗೆ ಜಾರಿಗೆ ಬರಲಿದೆ. ಇದು ನಾನು ನೀಡುತ್ತಿರುವ ಗ್ಯಾರಂಟಿ ಎಂದಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವಾಲಯದ ಸಹಾಯಕ ಸಚಿವ ಅಜಯ ಕುಮಾರ್ ಮಿಶ್ರಾ, ಇದೇ ಮಾರ್ಚ್ ಒಳಗೆ ಸಿಎಎ ಕಾಯ್ದೆ ಜಾರಿಗೆ ಬರಲಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಸಿಎಎ ಕಾಯ್ದೆಯನ್ನು ಜಾರಿಗೆ ತರುವ ಉದ್ದೇಶ ಹೊಂದಿದೆ ಎನ್ನೋದು ಖಚಿತವಾಗಿತ್ತು. 2019ರಲ್ಲಿ ಕೇಂದ್ರ ಸರಕಾರ ಸಿಟಿಜನ್ ಶಿಪ್ ಅಮೆಂಡ್ ಮೆಂಟ್ ಏಕ್ಟ್ (ಸಿಎಎ) ಅನ್ನು ತಿದ್ದುಪಡಿ ತಂದಿತ್ತು. 2014ಕ್ಕೂ ಹಿಂದೆ ನೆರೆ ರಾಷ್ಟ್ರಗಳಿಂದ ಭಾರತಕ್ಕೆ ಬಂದಿರುವ ಅಲ್ಲಿನ ಅಲ್ಪಸಂಖ್ಯಾತರಿಗೆ ದೇಶದ ನಾಗರಿಕತ್ವ ನೀಡಲು ಕಾಯ್ದೆ ಅವಕಾಶ ನೀಡುತ್ತದೆ.
ಪಶ್ಚಿಮ ಬಂಗಾಳದ ಗಡಿಭಾಗ ಬೊಂಗಾವ್ ಲೋಕಸಭೆ ಕ್ಷೇತ್ರದ ಸದಸ್ಯರಾಗಿರುವ ಶಂತನು ಠಾಕೂರ್ ಅವರಿಗೆ ಸಿಎಎ ಕಾಯ್ದೆ ಜಾರಿಗೊಳಿಸುವ ಅನಿವಾರ್ಯತೆಯಿದೆ. 2019ರಲ್ಲಿ ಸಿಎಎ ಕಾಯ್ದೆ ಜಾರಿಗೆ ತರುತ್ತೇವೆ ಎಂದೇ ಅವರು ಚುನಾವಣೆ ಎದುರಿಸಿದ್ದರು. ಈ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದಿರುವ ಮಥುವಾ ಬುಡಕಟ್ಟು ಸಮುದಾಯದವರಿದ್ದು 1950ರಿಂದಲೂ ಬಾಂಗ್ಲಾದಿಂದ ಭಾರತಕ್ಕೆ ಬಂದು ನೆಲೆಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೂ ಮುನ್ನ ಕಾಯ್ದೆ ಜಾರಿಗೊಳಿಸುವುದಾಗಿ ಶಂತನು ಠಾಕೂರ್ ಹೇಳಿದ್ದಾರೆ. ಆದರೆ ಈ ಕಾಯ್ದೆ ಜಾರಿಯಿಂದ ಮುಸ್ಲಿಮರಿಗೆ ಅನ್ಯಾಯ ಆಗಲಿದೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದ್ದು ಕಳೆದ ಬಾರಿ ದೇಶಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿತ್ತು.
Over the past few days Union Minister of State for Shipping, Santanu Thakur has said that the Citizenship (Amendment) Act (CAA) would be implemented in the country within a week. Mr. Santanu said this while addressing a rally at South 24 Paraganas district on January 28. He is also BJP MP from Bongaon.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am