ಬ್ರೇಕಿಂಗ್ ನ್ಯೂಸ್
30-01-24 01:38 pm HK News Desk ದೇಶ - ವಿದೇಶ
ನವದೆಹಲಿ, ಜ.30: ಅಮೆರಿಕದ ಸೇನಾಪಡೆ ಸದ್ಯದಲ್ಲೇ ಇರಾನ್ ಮೇಲೆ ದಾಳಿ ನಡೆಸಲಿದೆ. ಅದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಇರಾನ್ ಪ್ರೇರಿತ ಬಂಡುಕೋರರು ಅಮೆರಿಕದ ನೌಕಾಪಡೆ ಮೇಲೆ ದಾಳಿ ನಡೆಸಿದ್ದು ಮೂವರು ಯೋಧರು ಸಾವನ್ನಪ್ಪಿದ್ದರು. ಕೃತ್ಯದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಬೇಕೆಂದು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರಿಗೆ ರಾಜಕೀಯ ಸಲಹೆಗಾರರು ಒತ್ತಡ ಹೇರಿದ್ದಾರೆ.
ಆದರೆ ಜೋ ಬಿಡೆನ್ ಇನ್ನೂ ಪ್ರತಿ ದಾಳಿಗೆ ಓಕೆ ಎಂದಿಲ್ಲ. ಇಸ್ರೇಲ್- ಹಮಾಸ್ ಸಂಘರ್ಷ ನಡೆಯುತ್ತಿರುವುದರಿಂದ ಅಮೆರಿಕವು ಇರಾನ್ ಮೇಲೆ ದಾಳಿ ನಡೆಸುವುದಕ್ಕೆ ಮೀನ ಮೇಷ ಎಣಿಸುತ್ತಿದೆ. ಆದರೆ ಸೇನಾ ಪಡೆ ಮತ್ತು ರಾಜಕೀಯ ತಜ್ಞರು ತೀವ್ರ ಪ್ರತಿದಾಳಿ ನಡೆಸಲೇಬೇಕೆಂದು ಅಧ್ಯಕ್ಷ ಜೋ ಬಿಡೆನ್ ಮೇಲೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ಅಮೆರಿಕದ ಸೇನಾ ಪಡೆಯ ಮೇಲೆ ಇರಾನ್ ಸೇನಾಪಡೆಯಿಂದಲೇ ಡ್ರೋಣ್ ದಾಳಿಯಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಇರಾನ್ ಹೊರಗಿನ ಸೇನಾಪಡೆ ಮತ್ತು ಬಂಡುಕೋರರ ಮೇಲೆ ಪ್ರತಿದಾಳಿ ನಡೆಸಬೇಕೆಂಬ ಅಭಿಪ್ರಾಯ ಬಲಗೊಳ್ಳುತ್ತಿದೆ.
ಈ ವಿಚಾರದಲ್ಲಿ ಜೋ ಬಿಡೆನ್ ತನ್ನ ರಾಜಕೀಯ ಸಲಹೆಗಾರರ ಜೊತೆಗೆ ಚರ್ಚಿಸುತ್ತಿದ್ದಾರೆ. ಚರ್ಚೆಯ ಬಳಿಕವೇ ಈ ಬಗ್ಗೆ ಜೋ ಬಿಡೆನ್ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಇತ್ತೀಚೆಗೆ ಇರಾನ್ ದಾಳಿಯ ಬಳಿಕ ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಲ್ಲಿನ ಮಾಧ್ಯಮಗಳು ಅಮೆರಿಕವು, ಇರಾನ್ ಜೊತೆಗೆ ಯುದ್ಧ ಬಯಸುವುದಿಲ್ಲ. ನಾವು ಅತಿಕ್ರಮಣವನ್ನೂ ಮಾಡುವುದಿಲ್ಲ. ಆದರೆ ಏನು ಆಗಬೇಕೋ ಅದನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದವು. ವೈಟ್ ಹೌಸ್ ನಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಕೂಡ ಇದೇ ಮಾತುಗಳನ್ನು ಉಲ್ಲೇಖಿಸಿದ್ದರು. ಇರಾನಿನ ಟೆಹ್ರಾನಲ್ಲಿರುವ ಬಂಡುಕೋರ ಗುಂಪುಗಳೇ ಈ ದಾಳಿ ನಡೆಸಿವೆ. ಇಸ್ಲಾಮಿಕ್ ಉಗ್ರವಾದಿ ಗುಂಪುಗಳಲ್ಲ ಎಂದವರು ಹೇಳಿದ್ದರು.
The United States is reportedly preparing to launch retaliatory attacks against Iran-backed groups, which were allegedly behind the recent drone attack on US troops in Jordan, killing three soldiers. According to Pentagon sources, the retaliation would likely begin in the next couple of days and come in waves against a range of targets once the president gave the go-ahead, Politico reported, citing officials.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am