ಬ್ರೇಕಿಂಗ್ ನ್ಯೂಸ್
30-01-24 01:38 pm HK News Desk ದೇಶ - ವಿದೇಶ
ನವದೆಹಲಿ, ಜ.30: ಅಮೆರಿಕದ ಸೇನಾಪಡೆ ಸದ್ಯದಲ್ಲೇ ಇರಾನ್ ಮೇಲೆ ದಾಳಿ ನಡೆಸಲಿದೆ. ಅದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಇರಾನ್ ಪ್ರೇರಿತ ಬಂಡುಕೋರರು ಅಮೆರಿಕದ ನೌಕಾಪಡೆ ಮೇಲೆ ದಾಳಿ ನಡೆಸಿದ್ದು ಮೂವರು ಯೋಧರು ಸಾವನ್ನಪ್ಪಿದ್ದರು. ಕೃತ್ಯದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಬೇಕೆಂದು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರಿಗೆ ರಾಜಕೀಯ ಸಲಹೆಗಾರರು ಒತ್ತಡ ಹೇರಿದ್ದಾರೆ.
ಆದರೆ ಜೋ ಬಿಡೆನ್ ಇನ್ನೂ ಪ್ರತಿ ದಾಳಿಗೆ ಓಕೆ ಎಂದಿಲ್ಲ. ಇಸ್ರೇಲ್- ಹಮಾಸ್ ಸಂಘರ್ಷ ನಡೆಯುತ್ತಿರುವುದರಿಂದ ಅಮೆರಿಕವು ಇರಾನ್ ಮೇಲೆ ದಾಳಿ ನಡೆಸುವುದಕ್ಕೆ ಮೀನ ಮೇಷ ಎಣಿಸುತ್ತಿದೆ. ಆದರೆ ಸೇನಾ ಪಡೆ ಮತ್ತು ರಾಜಕೀಯ ತಜ್ಞರು ತೀವ್ರ ಪ್ರತಿದಾಳಿ ನಡೆಸಲೇಬೇಕೆಂದು ಅಧ್ಯಕ್ಷ ಜೋ ಬಿಡೆನ್ ಮೇಲೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ಅಮೆರಿಕದ ಸೇನಾ ಪಡೆಯ ಮೇಲೆ ಇರಾನ್ ಸೇನಾಪಡೆಯಿಂದಲೇ ಡ್ರೋಣ್ ದಾಳಿಯಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಇರಾನ್ ಹೊರಗಿನ ಸೇನಾಪಡೆ ಮತ್ತು ಬಂಡುಕೋರರ ಮೇಲೆ ಪ್ರತಿದಾಳಿ ನಡೆಸಬೇಕೆಂಬ ಅಭಿಪ್ರಾಯ ಬಲಗೊಳ್ಳುತ್ತಿದೆ.
ಈ ವಿಚಾರದಲ್ಲಿ ಜೋ ಬಿಡೆನ್ ತನ್ನ ರಾಜಕೀಯ ಸಲಹೆಗಾರರ ಜೊತೆಗೆ ಚರ್ಚಿಸುತ್ತಿದ್ದಾರೆ. ಚರ್ಚೆಯ ಬಳಿಕವೇ ಈ ಬಗ್ಗೆ ಜೋ ಬಿಡೆನ್ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಇತ್ತೀಚೆಗೆ ಇರಾನ್ ದಾಳಿಯ ಬಳಿಕ ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಲ್ಲಿನ ಮಾಧ್ಯಮಗಳು ಅಮೆರಿಕವು, ಇರಾನ್ ಜೊತೆಗೆ ಯುದ್ಧ ಬಯಸುವುದಿಲ್ಲ. ನಾವು ಅತಿಕ್ರಮಣವನ್ನೂ ಮಾಡುವುದಿಲ್ಲ. ಆದರೆ ಏನು ಆಗಬೇಕೋ ಅದನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದವು. ವೈಟ್ ಹೌಸ್ ನಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಕೂಡ ಇದೇ ಮಾತುಗಳನ್ನು ಉಲ್ಲೇಖಿಸಿದ್ದರು. ಇರಾನಿನ ಟೆಹ್ರಾನಲ್ಲಿರುವ ಬಂಡುಕೋರ ಗುಂಪುಗಳೇ ಈ ದಾಳಿ ನಡೆಸಿವೆ. ಇಸ್ಲಾಮಿಕ್ ಉಗ್ರವಾದಿ ಗುಂಪುಗಳಲ್ಲ ಎಂದವರು ಹೇಳಿದ್ದರು.
The United States is reportedly preparing to launch retaliatory attacks against Iran-backed groups, which were allegedly behind the recent drone attack on US troops in Jordan, killing three soldiers. According to Pentagon sources, the retaliation would likely begin in the next couple of days and come in waves against a range of targets once the president gave the go-ahead, Politico reported, citing officials.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am