ಬ್ರೇಕಿಂಗ್ ನ್ಯೂಸ್
30-01-24 01:38 pm HK News Desk ದೇಶ - ವಿದೇಶ
ನವದೆಹಲಿ, ಜ.30: ಅಮೆರಿಕದ ಸೇನಾಪಡೆ ಸದ್ಯದಲ್ಲೇ ಇರಾನ್ ಮೇಲೆ ದಾಳಿ ನಡೆಸಲಿದೆ. ಅದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಇರಾನ್ ಪ್ರೇರಿತ ಬಂಡುಕೋರರು ಅಮೆರಿಕದ ನೌಕಾಪಡೆ ಮೇಲೆ ದಾಳಿ ನಡೆಸಿದ್ದು ಮೂವರು ಯೋಧರು ಸಾವನ್ನಪ್ಪಿದ್ದರು. ಕೃತ್ಯದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಬೇಕೆಂದು ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರಿಗೆ ರಾಜಕೀಯ ಸಲಹೆಗಾರರು ಒತ್ತಡ ಹೇರಿದ್ದಾರೆ.
ಆದರೆ ಜೋ ಬಿಡೆನ್ ಇನ್ನೂ ಪ್ರತಿ ದಾಳಿಗೆ ಓಕೆ ಎಂದಿಲ್ಲ. ಇಸ್ರೇಲ್- ಹಮಾಸ್ ಸಂಘರ್ಷ ನಡೆಯುತ್ತಿರುವುದರಿಂದ ಅಮೆರಿಕವು ಇರಾನ್ ಮೇಲೆ ದಾಳಿ ನಡೆಸುವುದಕ್ಕೆ ಮೀನ ಮೇಷ ಎಣಿಸುತ್ತಿದೆ. ಆದರೆ ಸೇನಾ ಪಡೆ ಮತ್ತು ರಾಜಕೀಯ ತಜ್ಞರು ತೀವ್ರ ಪ್ರತಿದಾಳಿ ನಡೆಸಲೇಬೇಕೆಂದು ಅಧ್ಯಕ್ಷ ಜೋ ಬಿಡೆನ್ ಮೇಲೆ ಒತ್ತಡ ಹೇರಿದ್ದಾರೆ. ಇತ್ತೀಚೆಗೆ ಅಮೆರಿಕದ ಸೇನಾ ಪಡೆಯ ಮೇಲೆ ಇರಾನ್ ಸೇನಾಪಡೆಯಿಂದಲೇ ಡ್ರೋಣ್ ದಾಳಿಯಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಇರಾನ್ ಹೊರಗಿನ ಸೇನಾಪಡೆ ಮತ್ತು ಬಂಡುಕೋರರ ಮೇಲೆ ಪ್ರತಿದಾಳಿ ನಡೆಸಬೇಕೆಂಬ ಅಭಿಪ್ರಾಯ ಬಲಗೊಳ್ಳುತ್ತಿದೆ.
ಈ ವಿಚಾರದಲ್ಲಿ ಜೋ ಬಿಡೆನ್ ತನ್ನ ರಾಜಕೀಯ ಸಲಹೆಗಾರರ ಜೊತೆಗೆ ಚರ್ಚಿಸುತ್ತಿದ್ದಾರೆ. ಚರ್ಚೆಯ ಬಳಿಕವೇ ಈ ಬಗ್ಗೆ ಜೋ ಬಿಡೆನ್ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಇತ್ತೀಚೆಗೆ ಇರಾನ್ ದಾಳಿಯ ಬಳಿಕ ಪೆಂಟಗಾನ್ ಮೂಲಗಳನ್ನು ಉಲ್ಲೇಖಿಸಿ ಅಲ್ಲಿನ ಮಾಧ್ಯಮಗಳು ಅಮೆರಿಕವು, ಇರಾನ್ ಜೊತೆಗೆ ಯುದ್ಧ ಬಯಸುವುದಿಲ್ಲ. ನಾವು ಅತಿಕ್ರಮಣವನ್ನೂ ಮಾಡುವುದಿಲ್ಲ. ಆದರೆ ಏನು ಆಗಬೇಕೋ ಅದನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದವು. ವೈಟ್ ಹೌಸ್ ನಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಕೂಡ ಇದೇ ಮಾತುಗಳನ್ನು ಉಲ್ಲೇಖಿಸಿದ್ದರು. ಇರಾನಿನ ಟೆಹ್ರಾನಲ್ಲಿರುವ ಬಂಡುಕೋರ ಗುಂಪುಗಳೇ ಈ ದಾಳಿ ನಡೆಸಿವೆ. ಇಸ್ಲಾಮಿಕ್ ಉಗ್ರವಾದಿ ಗುಂಪುಗಳಲ್ಲ ಎಂದವರು ಹೇಳಿದ್ದರು.
The United States is reportedly preparing to launch retaliatory attacks against Iran-backed groups, which were allegedly behind the recent drone attack on US troops in Jordan, killing three soldiers. According to Pentagon sources, the retaliation would likely begin in the next couple of days and come in waves against a range of targets once the president gave the go-ahead, Politico reported, citing officials.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm