ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm