ಬ್ರೇಕಿಂಗ್ ನ್ಯೂಸ್
03-02-24 11:34 am HK News Desk ದೇಶ - ವಿದೇಶ
ನವದೆಹಲಿ, ಫೆ 03: 2012 ರ ಯುಪಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರಿಗೆ ಶುಕ್ರವಾರ ಲಕ್ನೋ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು 1,100 ರೂಪಾಯಿ ದಂಡ ವಿಧಿಸಿದೆ.
ಸಂಸದ-ಶಾಸಕ ನ್ಯಾಯಾಲಯದ ವಿಶೇಷ ಹೆಚ್ಚುವರಿ ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಅಂಬರೀಶ್ ಕುಮಾರ್ ಶ್ರೀವಾಸ್ತವ ಅವರು, ಪ್ರಯಾಗ್ರಾಜ್ನ ಹಾಲಿ ಬಿಜೆಪಿ ಸಂಸದೆ ಜೋಶಿ ಅವರು ಕಾಂಗ್ರೆಸ್ ಪಕ್ಷದ ಪರವಾಗಿ (ಆ ಸಮಯದಲ್ಲಿ ಅವರು ಕಾಂಗ್ರೆಸ್ನಲ್ಲಿದ್ದರು) ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದಕ್ಕಾಗಿ ತಪ್ಪಿತಸ್ಥರೆಂದು ತೀರ್ಪು ನೀಡಿದ್ದಾರೆ.
ಫೆಬ್ರವರಿ 17, 2012 ರಂದು ಸಂಜೆ 6.50 ರ ಸುಮಾರಿಗೆ ರೀಟಾ ಬಹುಗುಣ ಜೋಶಿ ಅವರು ಲಕ್ನೋದ ಕ್ಯಾಂಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣ ನಗರದ ಬಜರಂಗನಗರ ಪ್ರದೇಶದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ನಡೆಸುತ್ತಿದ್ದರು ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿತ್ತು. ಪ್ರಚಾರದ ಸಮಯ ಮುಗಿದ ನಂತರವೂ ಜೋಶಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು. ಅವರು ಈ ಚುನಾವಣೆಯಲ್ಲಿ ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು.
ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು, ಈ ಕುರಿತು ಸ್ಟ್ಯಾಟಿಕ್ ಸರ್ವೆಲೆನ್ಸ್ ಮ್ಯಾಜಿಸ್ಟ್ರೇಟ್ ಮುಖೇಶ್ ಚತುರ್ವೇದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ರೀಟಾ ಬಹುಗುಣ ಜೋಶಿ ಸುಮಾರು 50 ಜನರೊಂದಿಗೆ ಭಜರಂಗನಗರದಲ್ಲಿ ಸಭೆ ನಡೆಸುತ್ತಿರುವುದನ್ನು ಕಂಡು ಕ್ಯಾಮೆರಾದಲ್ಲಿ ದಾಖಲಿಸಿದ್ದಾರೆ. ಈ ಸಂಬಂಧ ಚತುರ್ವೇದಿ ಕೃಷ್ಣನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸ್ ತನಿಖೆಯ ನಂತರ, ಅದೇ ವರ್ಷ ಸೆಪ್ಟೆಂಬರ್ 12 ರಂದು ನ್ಯಾಯಾಲಯಕ್ಕೆ ಜೋಶಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಯಿತು. 20 ಫೆಬ್ರವರಿ 2021 ರಂದು ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ರ ಅಡಿಯಲ್ಲಿ ಅವರ ವಿರುದ್ಧ ಆರೋಪಗಳನ್ನು ರೂಪಿಸಿತು.
A Lucknow court on Friday sentenced Bharatiya Janata Party MP Rita Bahuguna Joshi to six months' imprisonment and imposed a fine of ₹ 1,100 for violating the code of conduct during the 2012 UP assembly elections. Ms Joshi, the current BJP MP from Prayagraj, was convicted of holding a meeting in violation of the code of conduct on behalf of the Congress party by Special Additional Chief Judicial Magistrate of MP-MLA Court (MP-MLA Court) Ambrish Kumar Srivastava
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am