ಬ್ರೇಕಿಂಗ್ ನ್ಯೂಸ್
07-02-24 01:32 pm HK News Desk ದೇಶ - ವಿದೇಶ
ಕಾಸರಗೋಡು, ಫೆ.7: ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು.
ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ಪ್ರಾಂತ ಪ್ರಚಾರಕ್ ನಂದೀಶ್, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಹಲವಾರು ಆರೆಸ್ಸೆಸ್, ಬಿಜೆಪಿ ಪ್ರಮುಖರು ಅಂತ್ಯಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
Kasaragod Rss leader Gopal Chettiyar dies at 77.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm