ಬ್ರೇಕಿಂಗ್ ನ್ಯೂಸ್
07-02-24 01:32 pm HK News Desk ದೇಶ - ವಿದೇಶ
ಕಾಸರಗೋಡು, ಫೆ.7: ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು.
ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ಪ್ರಾಂತ ಪ್ರಚಾರಕ್ ನಂದೀಶ್, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಹಲವಾರು ಆರೆಸ್ಸೆಸ್, ಬಿಜೆಪಿ ಪ್ರಮುಖರು ಅಂತ್ಯಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
Kasaragod Rss leader Gopal Chettiyar dies at 77.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am