ಬ್ರೇಕಿಂಗ್ ನ್ಯೂಸ್
07-02-24 01:32 pm HK News Desk ದೇಶ - ವಿದೇಶ
ಕಾಸರಗೋಡು, ಫೆ.7: ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು.
ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ಪ್ರಾಂತ ಪ್ರಚಾರಕ್ ನಂದೀಶ್, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಹಲವಾರು ಆರೆಸ್ಸೆಸ್, ಬಿಜೆಪಿ ಪ್ರಮುಖರು ಅಂತ್ಯಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
Kasaragod Rss leader Gopal Chettiyar dies at 77.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm