ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm