ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm