ಬ್ರೇಕಿಂಗ್ ನ್ಯೂಸ್
15-02-24 11:14 pm HK NEWS ದೇಶ - ವಿದೇಶ
ಪಾಟ್ನಾ, ಫೆ.15: ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ಮಹಿಳೆಯನ್ನು ಅಂತ್ಯ ಸಂಸ್ಕಾರಕ್ಕಾಗಿ ಒಯ್ಯುತ್ತಿದ್ದಾಗ ದಿಢೀರ್ ಆಗಿ ಬದುಕಿ ಬಂದ ಘಟನೆ ಬಿಹಾರದಲ್ಲಿ ನಡೆದಿದೆ.
ಮೃತದೇಹವನ್ನು ಛತ್ತೀಸ್ಗಢದಿಂದ ಬಿಹಾರಕ್ಕೆ ತರುವಾಗ 18 ಗಂಟೆ ಪ್ರಯಾಣ ತಗಲಿತ್ತು. ಪ್ರಯಾಣದ ಬಳಿಕ ಆಕೆ ಏಕಾಏಕಿ ಮಾರ್ಗಮಧ್ಯೆ ಮಹಿಳೆ ಜೀವ ಪಡೆದಿದ್ದು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ರಾಮವತಿ ದೇವಿ ಎಂಬ ಮಹಿಳೆ ಈ ರೀತಿ ಮರುಜನ್ಮ ಪಡೆದಾಕೆ. ಈಕೆ ಬಿಹಾರದ ಬೇಗುಸರಾಯ್ ಜಿಲ್ಲೆಯ ನೀಮಾ ಚಂದ್ಪುರ ಗ್ರಾಮದ ನಿವಾಸಿ. ತನ್ನ ಇಬ್ಬರು ಮಕ್ಕಳಾದ ಮುರಾರಿ ಶಾವೋ ಮತ್ತು ಘನಶ್ಯಾಮ್ ಶಾವೋ ಜೊತೆ ಇತ್ತೀಚೆಗೆ ಛತ್ತೀಸ್ಗಢಕ್ಕೆ ತೆರಳಿದ್ದರು. ಫೆಬ್ರವರಿ 11 ರಂದು ರಾಮವತಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಕ್ಷಣವೇ ಆಕೆಯನ್ನು ಕೊರ್ವಾ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಆಕೆ ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದರು.
ಪುತ್ರರಿಬ್ಬರು ತಾಯಿಯನ್ನು ತಮ್ಮೂರಿಗೆ ತಂದು ಅಂತ್ಯಸಂಸ್ಕಾರ ಮಾಡಲು ಬಯಸಿದ್ದು, ಅದರಂತೆ ಬಿಹಾರಕ್ಕೆ ಶವವನ್ನು ವಾಪಸ್ ತರುತ್ತಿದ್ದರು. ಫೆಬ್ರವರಿ 12 ರಂದು ಖಾಸಗಿ ವಾಹನದಲ್ಲಿ ದೇಹವನ್ನು ಬೇಗುಸರೈಗೆ ತರಲಾಗುತ್ತಿತ್ತು. ಛತ್ತೀಸ್ಗಢದಿಂದ 18 ಗಂಟೆಗಳ ಪ್ರಯಾಣದ ನಂತರ ಬಿಹಾರದ ಔರಂಗಾಬಾದ್ ತಲುಪಿದಾಗ ಅಚ್ಚರಿ ಎಂಬಂತೆ ರಾಮವತಿ ಇದ್ದಕ್ಕಿದ್ದಂತೆ ಎದ್ದು ಕುಳಿತಿದ್ದಾರೆ.
ಇದನ್ನು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ರಸ್ತೆ ಬದಿ ವಾಹನ ನಿಲ್ಲಿಸಿ ಆಕೆಯನ್ನು ಭಯದಿಂದಲೇ ಪರೀಕ್ಷಿಸಿದ್ದಾರೆ. ಮಹಿಳೆ ಜೀವಂತವಾಗಿರುವುದನ್ನು ಕಂಡುಕೊಂಡ ಅವರು ಬೇಗುಸರಾಯ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆಕೆಯನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ವಾಹನದಲ್ಲಿ ಕರೆತರುತ್ತಿದ್ದಾಗ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್) ಆಗಿ ಮಹಿಳೆ ಬದುಕಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ, ವಾಹನ ಅಲುಗಾಡಿದಾಗ ದೇಹ ಕುಲುಕಿ ಮಹಿಳೆಗೆ ಉಸಿರಾಟ ಮರು ಆರಂಭವಾಗಿದೆ. ಹೃದಯಸ್ತಂಭನ ಉಂಟಾದಾಗ ಸಿಪಿಆರ್ ಮಾಡಲಾಗುತ್ತದೆ. ಅದಿಲ್ಲಿ ಸಹಜವಾಗಿ ಆಗಿದೆ ಎಂದಿದ್ದಾರೆ.
An elderly woman who was declared dead in Chhattisgarh, miraculously came back to life as soon as she entered her native state Bihar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm