ಬ್ರೇಕಿಂಗ್ ನ್ಯೂಸ್
15-02-24 11:14 pm HK NEWS ದೇಶ - ವಿದೇಶ
ಪಾಟ್ನಾ, ಫೆ.15: ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ಮಹಿಳೆಯನ್ನು ಅಂತ್ಯ ಸಂಸ್ಕಾರಕ್ಕಾಗಿ ಒಯ್ಯುತ್ತಿದ್ದಾಗ ದಿಢೀರ್ ಆಗಿ ಬದುಕಿ ಬಂದ ಘಟನೆ ಬಿಹಾರದಲ್ಲಿ ನಡೆದಿದೆ.
ಮೃತದೇಹವನ್ನು ಛತ್ತೀಸ್ಗಢದಿಂದ ಬಿಹಾರಕ್ಕೆ ತರುವಾಗ 18 ಗಂಟೆ ಪ್ರಯಾಣ ತಗಲಿತ್ತು. ಪ್ರಯಾಣದ ಬಳಿಕ ಆಕೆ ಏಕಾಏಕಿ ಮಾರ್ಗಮಧ್ಯೆ ಮಹಿಳೆ ಜೀವ ಪಡೆದಿದ್ದು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ರಾಮವತಿ ದೇವಿ ಎಂಬ ಮಹಿಳೆ ಈ ರೀತಿ ಮರುಜನ್ಮ ಪಡೆದಾಕೆ. ಈಕೆ ಬಿಹಾರದ ಬೇಗುಸರಾಯ್ ಜಿಲ್ಲೆಯ ನೀಮಾ ಚಂದ್ಪುರ ಗ್ರಾಮದ ನಿವಾಸಿ. ತನ್ನ ಇಬ್ಬರು ಮಕ್ಕಳಾದ ಮುರಾರಿ ಶಾವೋ ಮತ್ತು ಘನಶ್ಯಾಮ್ ಶಾವೋ ಜೊತೆ ಇತ್ತೀಚೆಗೆ ಛತ್ತೀಸ್ಗಢಕ್ಕೆ ತೆರಳಿದ್ದರು. ಫೆಬ್ರವರಿ 11 ರಂದು ರಾಮವತಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಕ್ಷಣವೇ ಆಕೆಯನ್ನು ಕೊರ್ವಾ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಆಕೆ ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದರು.
ಪುತ್ರರಿಬ್ಬರು ತಾಯಿಯನ್ನು ತಮ್ಮೂರಿಗೆ ತಂದು ಅಂತ್ಯಸಂಸ್ಕಾರ ಮಾಡಲು ಬಯಸಿದ್ದು, ಅದರಂತೆ ಬಿಹಾರಕ್ಕೆ ಶವವನ್ನು ವಾಪಸ್ ತರುತ್ತಿದ್ದರು. ಫೆಬ್ರವರಿ 12 ರಂದು ಖಾಸಗಿ ವಾಹನದಲ್ಲಿ ದೇಹವನ್ನು ಬೇಗುಸರೈಗೆ ತರಲಾಗುತ್ತಿತ್ತು. ಛತ್ತೀಸ್ಗಢದಿಂದ 18 ಗಂಟೆಗಳ ಪ್ರಯಾಣದ ನಂತರ ಬಿಹಾರದ ಔರಂಗಾಬಾದ್ ತಲುಪಿದಾಗ ಅಚ್ಚರಿ ಎಂಬಂತೆ ರಾಮವತಿ ಇದ್ದಕ್ಕಿದ್ದಂತೆ ಎದ್ದು ಕುಳಿತಿದ್ದಾರೆ.
ಇದನ್ನು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ರಸ್ತೆ ಬದಿ ವಾಹನ ನಿಲ್ಲಿಸಿ ಆಕೆಯನ್ನು ಭಯದಿಂದಲೇ ಪರೀಕ್ಷಿಸಿದ್ದಾರೆ. ಮಹಿಳೆ ಜೀವಂತವಾಗಿರುವುದನ್ನು ಕಂಡುಕೊಂಡ ಅವರು ಬೇಗುಸರಾಯ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆಕೆಯನ್ನು ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ವಾಹನದಲ್ಲಿ ಕರೆತರುತ್ತಿದ್ದಾಗ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್) ಆಗಿ ಮಹಿಳೆ ಬದುಕಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ, ವಾಹನ ಅಲುಗಾಡಿದಾಗ ದೇಹ ಕುಲುಕಿ ಮಹಿಳೆಗೆ ಉಸಿರಾಟ ಮರು ಆರಂಭವಾಗಿದೆ. ಹೃದಯಸ್ತಂಭನ ಉಂಟಾದಾಗ ಸಿಪಿಆರ್ ಮಾಡಲಾಗುತ್ತದೆ. ಅದಿಲ್ಲಿ ಸಹಜವಾಗಿ ಆಗಿದೆ ಎಂದಿದ್ದಾರೆ.
An elderly woman who was declared dead in Chhattisgarh, miraculously came back to life as soon as she entered her native state Bihar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm