ಬ್ರೇಕಿಂಗ್ ನ್ಯೂಸ್
18-02-24 01:27 pm HK News Desk ದೇಶ - ವಿದೇಶ
ನವದೆಹಲಿ, ಫೆ.18: ಉತ್ತರ ಭಾರತದಲ್ಲಿ ನೆಲೆಸಿದ್ದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಆಚರಿಸಿ ದೇಹತ್ಯಾಗ ಮಾಡಿದ್ದಾರೆ. ಛತ್ತೀಸ್ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯ ದಿನಗಳನ್ನು ಕಳೆದಿದ್ದಾರೆ.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಆಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳಿಂದ ಆಹಾರ ಹಾಗೂ ನೀರನ್ನು ತ್ಯಜಿಸಿದ್ದ ಅವರು ಆಮೂಲಕ ಜೀವಾಂತ್ಯ ಮಾಡಿದ್ದಾರೆ.
ಆಚಾರ್ಯರು ಕೊನೆಯ ಉಸಿರಿನ ವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದಾರೆ. ಮುನಿಗಳ ಅಂತ್ಯಸಂಸ್ಕಾರವು ಫೆಬ್ರವರಿ 18ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಜೈನ ಧರ್ಮದ ವಿಧಿಗಳ ಪ್ರಕಾರ ನಡೆಯಲಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ 10 ಅಕ್ಟೋಬರ್ 1946 ರಂದು ಜನಿಸಿದ್ದ ಆಚಾರ್ಯರು ರಾಜಸ್ಥಾನದಲ್ಲಿ ಮುನಿ ದೀಕ್ಷೆ ಪಡೆದಿದ್ದರು. 30 ಜೂನ್ 1968 ರಂದು ರಾಜಸ್ಥಾನದ ಅಜ್ಮೀರ್ ನಗರದಲ್ಲಿ ಗುರು ಆಚಾರ್ಯ ಶ್ರೀ ಜ್ಞಾನಸಾಗರ್ ಮಹಾರಾಜ್ ಅವರಿಂದ ಮುನಿದೀಕ್ಷೆಯನ್ನು ಪಡೆದಿದ್ದರು.
ಆಚಾರ್ಯರು 1975ರ ಸುಮಾರಿಗೆ ಬುಂದೇಲಖಂಡಕ್ಕೆ ಬಂದು ನೆಲೆಸಿದ್ದರು. ತಮ್ಮ ಹೆಚ್ಚಿನ ಸಮಯವನ್ನು ಬುಂದೇಲ್ಖಂಡದಲ್ಲಿ ಕಳೆದಿದ್ದು ಆಚಾರ್ಯರು ತಮ್ಮ ಜೀವನದಲ್ಲಿ ಸುಮಾರು 350 ಮಂದಿಗೆ ದೀಕ್ಷೆ ನೀಡಿದ್ದಾರೆ. ಮುನಿಗಳು ಹಿಂದಿ, ಮರಾಠಿ ಮತ್ತು ಕನ್ನಡದಲ್ಲಿ ಪರಿಣತರಾಗಿದ್ದರು. ಹಿಂದಿ ಹಾಗೂ ಸಂಸ್ಕೃತದಲ್ಲಿ ಸಾಕಷ್ಟು ಲೇಖನ ಬರೆದಿದ್ದಾರೆ. ಆಚಾರ್ಯರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Renowned Jain seer Acharya Vidyasagar Maharaj breathed his last on Sunday at Chandragiri Teerth in Dongargarh in Chhattisgarh's Rajnandgaon district after undertaking 'sallekhna'. Sallekhna is a Jain religious practice involving voluntary fasting unto death for spiritual purification, a statement from the teerth said.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm