ಬ್ರೇಕಿಂಗ್ ನ್ಯೂಸ್
18-02-24 01:27 pm HK News Desk ದೇಶ - ವಿದೇಶ
ನವದೆಹಲಿ, ಫೆ.18: ಉತ್ತರ ಭಾರತದಲ್ಲಿ ನೆಲೆಸಿದ್ದ ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಆಚರಿಸಿ ದೇಹತ್ಯಾಗ ಮಾಡಿದ್ದಾರೆ. ಛತ್ತೀಸ್ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯ ದಿನಗಳನ್ನು ಕಳೆದಿದ್ದಾರೆ.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಆಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳಿಂದ ಆಹಾರ ಹಾಗೂ ನೀರನ್ನು ತ್ಯಜಿಸಿದ್ದ ಅವರು ಆಮೂಲಕ ಜೀವಾಂತ್ಯ ಮಾಡಿದ್ದಾರೆ.

ಆಚಾರ್ಯರು ಕೊನೆಯ ಉಸಿರಿನ ವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದಾರೆ. ಮುನಿಗಳ ಅಂತ್ಯಸಂಸ್ಕಾರವು ಫೆಬ್ರವರಿ 18ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಜೈನ ಧರ್ಮದ ವಿಧಿಗಳ ಪ್ರಕಾರ ನಡೆಯಲಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಸದಲಗಾ ಗ್ರಾಮದಲ್ಲಿ 10 ಅಕ್ಟೋಬರ್ 1946 ರಂದು ಜನಿಸಿದ್ದ ಆಚಾರ್ಯರು ರಾಜಸ್ಥಾನದಲ್ಲಿ ಮುನಿ ದೀಕ್ಷೆ ಪಡೆದಿದ್ದರು. 30 ಜೂನ್ 1968 ರಂದು ರಾಜಸ್ಥಾನದ ಅಜ್ಮೀರ್ ನಗರದಲ್ಲಿ ಗುರು ಆಚಾರ್ಯ ಶ್ರೀ ಜ್ಞಾನಸಾಗರ್ ಮಹಾರಾಜ್ ಅವರಿಂದ ಮುನಿದೀಕ್ಷೆಯನ್ನು ಪಡೆದಿದ್ದರು.

ಆಚಾರ್ಯರು 1975ರ ಸುಮಾರಿಗೆ ಬುಂದೇಲಖಂಡಕ್ಕೆ ಬಂದು ನೆಲೆಸಿದ್ದರು. ತಮ್ಮ ಹೆಚ್ಚಿನ ಸಮಯವನ್ನು ಬುಂದೇಲ್ಖಂಡದಲ್ಲಿ ಕಳೆದಿದ್ದು ಆಚಾರ್ಯರು ತಮ್ಮ ಜೀವನದಲ್ಲಿ ಸುಮಾರು 350 ಮಂದಿಗೆ ದೀಕ್ಷೆ ನೀಡಿದ್ದಾರೆ. ಮುನಿಗಳು ಹಿಂದಿ, ಮರಾಠಿ ಮತ್ತು ಕನ್ನಡದಲ್ಲಿ ಪರಿಣತರಾಗಿದ್ದರು. ಹಿಂದಿ ಹಾಗೂ ಸಂಸ್ಕೃತದಲ್ಲಿ ಸಾಕಷ್ಟು ಲೇಖನ ಬರೆದಿದ್ದಾರೆ. ಆಚಾರ್ಯರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Renowned Jain seer Acharya Vidyasagar Maharaj breathed his last on Sunday at Chandragiri Teerth in Dongargarh in Chhattisgarh's Rajnandgaon district after undertaking 'sallekhna'. Sallekhna is a Jain religious practice involving voluntary fasting unto death for spiritual purification, a statement from the teerth said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am