ಬ್ರೇಕಿಂಗ್ ನ್ಯೂಸ್
25-11-20 11:02 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 25: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಲವ್ ಜಿಹಾದ್ ವಿರುದ್ಧ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿದೆ. ಧರ್ಮ ಆಧರಿತ ಮತಾಂತರ ವಿರೋಧಿ ಕಾಯ್ದೆ – 2020 ಅನ್ನು ಜಾರಿಗೆ ತಂದಿದ್ದು, ಮುಂದಿನ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಅಂಕಿತ ಪಡೆಯಲು ಯೋಜನೆ ಹಾಕಿದೆ.
ಲವ್ ಜಿಹಾದ್ ಕೃತ್ಯವನ್ನು ಮಟ್ಟ ಹಾಕಲು ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ಉತ್ತರ ಪ್ರದೇಶ ಬಿಜೆಪಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದರು. ಪ್ರೀತಿ, ಪ್ರೇಮದ ಹೆಸರಲ್ಲಿ ಹಿಂದು ಹುಡುಗಿಯರನ್ನು ಮದುವೆಯಾಗಿ ಮತಾಂತರಿಸುವ ಕಾರ್ಯದ ವಿರುದ್ಧ ಕಾನೂನು ತರುವ ಬಗ್ಗೆ ಯೋಗಿ, ಅಧಿಕಾರಿಗಳಿಂದ ವರದಿಯನ್ನು ಕೇಳಿದ್ದರು.

ಈ ಕಾನೂನಿನಲ್ಲಿ ಲವ್ ಜಿಹಾದ್ ಬಗ್ಗೆ ಉಲ್ಲೇಖ ಇಲ್ಲ. ಆದರೆ, ಎಲ್ಲ ರೀತಿಯ ಮತಾಂತರ ಚಟುವಟಿಕೆಗಳು ಈ ಕಾನೂನಿನ ವ್ಯಾಪ್ತಿಗೆ ಬರಲಿವೆ. ಅಲ್ಲದೆ, ಈ ಕಾನೂನು ಹಿಂದು- ಮುಸ್ಲಿಮರ ಮತಾಂತರದ ಬಗ್ಗೆ ಮಾತ್ರ ಟಾರ್ಗೆಟ್ ಆಗಿಲ್ಲ. ಮದುವೆ ಕಾರಣಕ್ಕೆ ಮತಾಂತರಿಸುವುದನ್ನು ಟಾರ್ಗೆಟ್ ಇಟ್ಟುಕೊಂಡು ಈ ಕಾನೂನು ತರಲಾಗಿದೆ ಎಂದು ಕಾನೂನು ಆಯೋಗದ ಅಧ್ಯಕ್ಷ ಜಸ್ಟಿಸ್ ಆದಿತ್ಯ ಮಿತ್ತಲ್ ಹೇಳಿದ್ದಾರೆ.

ಬಲವಂತದ ಮತಾಂತರದ ವಿರುದ್ಧ ಕಾನೂನು ರೂಪಿಸಲು ಕಳೆದ ವರ್ಷ ಆಯೋಗದಿಂದ ವರದಿ ನೀಡಲಾಗಿತ್ತು. ಈಗ ಅದನ್ನೇ ಸ್ವಲ್ಪ ಬದಲಾಯಿಸಿಕೊಂಡು ಹೊಸ ರೀತಿಯ ಕಾನೂನು ತರಲಾಗಿದೆ ಎಂದು ಮಿತ್ತಲ್ ಹೇಳಿದ್ದಾರೆ.
ಸ್ವಾತಂತ್ರ್ಯ ಪೂರ್ವ ಮ್ತತು ಅನಂತರ ಕಾಲದಲ್ಲಿ ಇದ್ದ ಕಾನೂನುಗಳು ಮತ್ತು ನೆರೆಯ ದೇಶಗಳಾದ ನೇಪಾಳ, ಮ್ಯಾನ್ಮಾರ್, ಭೂತಾನ್, ಶ್ರೀಲಂಕಾ ಮತ್ತು ಪಾಕಿಸ್ತಾನದ ಕೋರ್ಟ್ ಗಳಲ್ಲಿ ಮತಾಂತರ ವಿಚಾರದಲ್ಲಿ ನೀಡಿರುವ ತೀರ್ಪುಗಳನ್ನು ಆಧರಿಸಿ ಈ ಕಾನೂನು ರೂಪಿಸಲಾಗಿದೆ ಎಂದಿದ್ದಾರೆ. ಆದರೆ, ಇದೇ ವೇಳೆ, ಮತಾಂತರ ವಿಚಾರದಲ್ಲಿ ಸ್ಪಷ್ಟ ಕಾನೂನು ನಮ್ಮಲ್ಲಿ ಇಲ್ಲ ಎಂದು ಮಿತ್ತಲ್ ಹೇಳಿದ್ದಾರೆ.
The Uttar Pradesh government Tuesday approved the draft of a stringent law to check unlawful conversions — which BJP leaders refer to as “love jihad” — in the state.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm