ಬ್ರೇಕಿಂಗ್ ನ್ಯೂಸ್
26-02-24 04:36 pm HK News Desk ದೇಶ - ವಿದೇಶ
ಲಕ್ನೋ, ಫೆ.26: ಜ್ಞಾನವಾಪಿ ಮಸೀದಿ ಕಟ್ಟಡದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಹಿಂದೂಗಳಿಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್, ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ವಾರಣಾಸಿ ಜಿಲ್ಲಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಜಿಲ್ಲಾ ನ್ಯಾಯಾಧೀಶರು ನೀಡಿರುವ ತೀರ್ಪು ಮತ್ತು ವ್ಯಾಸ್ ಜೀ ಕಾ ತೆಹಖಾನಾದಲ್ಲಿ ಪೂಜೆ ಸಲ್ಲಿಸಬಹುದು ಎಂದು ಜನವರಿ 31ರಂದು ನೀಡಿದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ಯಾವುದೇ ಅಗತ್ಯ ಕಾಣುತ್ತಿಲ್ಲ ಎಂದು ತೀರ್ಪು ನೀಡಿದ್ದಾರೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, "ಜನವರಿ 17 ಮತ್ತು 31ರ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಸಲ್ಲಿಸಿದ್ದ ಮೊದಲ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇದರಂತೆ ಜ್ಞಾನವಾಪಿ ಸಂಕೀರ್ಣದ 'ವ್ಯಾಸ್ ಜೀ ಕಾ ತೆಹಖಾನಾ'ದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಸುವುದಕ್ಕೆ ತೊಂದರೆಯಿಲ್ಲ. ಅಂಜುಮನ್ ಇಂತೇಜಾಮಿಯಾ ಸುಪ್ರೀಂ ಕೋರ್ಟ್ಗೆ ಹೋಗುವ ಸಾಧ್ಯತೆ ಇದೆ. ಆಗ ನಾವು ನಮ್ಮ ಕೇವಿಯಟ್ ಅನ್ನು ಉನ್ನತ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಜನವರಿ 31 ರಂದು ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ನೆಲಮಾಳಿಗೆ 'ವ್ಯಾಸ್ ತೆಹಖಾನಾ'ದಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು ಎಂದು ತೀರ್ಪು ನೀಡಿತ್ತು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಗೆ ಪೂಜಾ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ನಿರ್ದೇಶನ ನೀಡಿತ್ತು.
The Allahabad High Court on Monday dismissed a plea by AIMC which challenged a Varanasi court’s order which had permitted the Hindu side to offer puja in the ‘vyas tehkhana’ of the Gyanvapi complex.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm